Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಡುಪಿಯ ಆಸ್ಪತ್ರೆಯಲ್ಲಿ ತಾಯಿ ತೊರೆದು...

ಉಡುಪಿಯ ಆಸ್ಪತ್ರೆಯಲ್ಲಿ ತಾಯಿ ತೊರೆದು ಹೋಗಿದ್ದ ಮಗು ಇಂದು ಸ್ವಿಝರ್ ಲ್ಯಾಂಡ್ ನ ಸಂಸದ!

ವಾರ್ತಾಭಾರತಿವಾರ್ತಾಭಾರತಿ14 Dec 2017 5:20 PM IST
share
ಉಡುಪಿಯ ಆಸ್ಪತ್ರೆಯಲ್ಲಿ ತಾಯಿ ತೊರೆದು ಹೋಗಿದ್ದ ಮಗು ಇಂದು ಸ್ವಿಝರ್ ಲ್ಯಾಂಡ್ ನ ಸಂಸದ!

ಹೊಸದಿಲ್ಲಿ, ಡಿ.14: ಸುಮಾರು ನಾಲ್ಕು ದಶಕಗಳ ಹಿಂದೆ ಉಡುಪಿಯ ಬಾಸೆಲ್ ಮಿಶಲ್ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ತಾಯಿಯೊಬ್ಬರು ಬಿಟ್ಟು ಹೋಗಿದ್ದರು. ಅನಾಥವಾಗಿದ್ದ ಆ ಮಗುವನ್ನು ಕೇರಳದ ತಲಶ್ಶೇರಿಯಲ್ಲಿ ಅನಾಥಾಶ್ರಮವನ್ನು ನಡೆಸುತ್ತಿದ್ದ ಸ್ವಿಸ್ ದಂಪತಿಯೊಂದು ತಮ್ಮೊಡನೆ ಕರೆದೊಯ್ದಿತ್ತು. ಇಂದು ಅದೇ ಮಗು ಸ್ವಿಝರ್ ಲ್ಯಾಂಡ್ ನ ಸಂಸತ್ತಿನಲ್ಲಿ ಸಂಸದರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರ ಹೆಸರು ನಿಕ್ ಗುಗ್ಗರ್. 1970 ಮೇ 1ರಂದು ಇವರು ಉಡುಪಿಯ ಬಾಸೆಲ್ ಮಿಶನ್ ಆಸ್ಪತ್ರೆಯಲ್ಲಿ ಜನಿಸಿದರು. ಆದರೆ ತಾಯಿ ಬಿಟ್ಟು ಹೋಗಿದ್ದರಿಂದ ನಿಕ್ ಅನಾಥರಾದರು. ಹೀಗೆ ಅನಾಥರಾಗಿದ್ದ ನಿಕ್ ಬಾಳಲ್ಲಿ ಬೆಳಕಾದವರು ಸ್ವಿಸ್ ದಂಪತಿ. ತಲಶೇರಿಯಲ್ಲಿ ಅನಾಥಾಶ್ರಮವನ್ನು ನಡೆಸುತ್ತಿದ್ದ ಈ ದಂಪತಿ ಮಗುವನ್ನು ತಮ್ಮ ಜೊತೆಗೊಯ್ದರು. ಸುಮಾರು 4 ವರ್ಷದವರೆಗೆ ನಿಕ್ ತಲಶ್ಶೇರಿಯಲ್ಲೇ ಇದ್ದರು. ತಲಶ್ಶೇರಿಯ ನೆಟ್ಟೂರ್ ನಲ್ಲಿ ಅವರು ಬಾಲ್ಯವನ್ನು ಕಳೆದರು. ನಾಲ್ವು ವರ್ಷಗಳ ನಂತರ ಪೋಷಕರು ನಿಕ್ ರನ್ನು ತಮ್ಮ ಜೊತೆ ಸ್ವಿಝರ್ ಲ್ಯಾಂಡ್ ಗೆ ಕರೆದೊಯ್ದರು.

ಇಂದಿಗೂ ಗುಗ್ಗರ್ ತಲಶ್ಶೇರಿಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ತಲಶ್ಶೇರಿಗೆ ಆಗಮಿಸಲಿದ್ದಾರೆ.

ಸ್ವಿಝರ್ ಲ್ಯಾಂಡ್ ನ 6ನೆ ಅತೀ ದೊಡ್ಡ ನಗರವಾದ ವಿಂಟರ್ ತರ್ ನ ನಗರ ಪಾರ್ಲಿಮೆಂಟ್ ನ ಕೌನ್ಸಿಲರ್ ಆಗುವ ಮೂಲಕ ನಿಕ್ ರಾಜಕೀಯವನ್ನು ಪ್ರವೇಶಿಸಿದರು. ಸ್ವಿಸ್ ಪಾರ್ಲಿಮೆಂಟ್ ನ ಅತೀ ಕಿರಿಯ ಸದಸ್ಯರಲ್ಲಿ ನಿಕ್ ಕೂಡ ಒಬ್ಬರಾಗಿದ್ದಾರೆ. ತಾನು ಸಾಮಾಜಿಕ ಸೇವೆಯ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದರಲ್ಲಿ ತನ್ನ ಸಾಕುತಂದೆಯ ಪಾತ್ರ ಮಹತ್ವದ್ದಾಗಿದೆ ಎಂದು ನಿಕ್ ಹೇಳುತ್ತಾರೆ.

ಸಾಮಾಜಿಕ ಕಾರ್ಯಕ್ರಮಗಳ ಮೂಲಕವೇ ನಿಕ್ ರಾಜಕೀಯ ಪ್ರವೇಶಿಸಿದ್ದು. ಬಾಸೆಲ್ ನ ಸೆಂಟರ್ ಫಾರ್ ಅಗೋಜಿಕ್ಸ್, ಯುನಿವರ್ಸಿಟಿ ಆಫ್ ಆಮ್ಸ್ ಟರ್ ಡ್ಯಾಮ್ ಹಾಗು ಝುರಿಕ್ ಯುನಿವರ್ಸಿಟಿಯಲ್ಲಿ ಶಿಕ್ಷಣ ಪಡೆದರು.

ಇವಾಂಜೆಲಿಕಲ್ ಪಾರ್ಟಿಯ ಅಭ್ಯರ್ಥಿಯಾದ ನಿಕ್ ಸ್ವಿಸ್ ಪಾರ್ಲಿಮೆಂಟ್ ಗೆ ಆಯ್ಕೆಯಾಗಿರುವ ನಿಕ್ ವಿವಾಹಿತರಾಗಿದ್ದು, ಪತ್ನಿ ಹಾಗು ಮೂವರು ಮಕ್ಕಳಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X