Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರೆಸ್ ಕ್ಲಬ್ ಉಳ್ಳಾಲ ವತಿಯಿಂದ...

ಪ್ರೆಸ್ ಕ್ಲಬ್ ಉಳ್ಳಾಲ ವತಿಯಿಂದ ಸೌಹಾರ್ದ ದೀಪಾವಳಿ ಕಾರ್ಯಕ್ರಮ

ಮೂವರು ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ6 Nov 2024 1:03 PM IST
share
ಪ್ರೆಸ್ ಕ್ಲಬ್ ಉಳ್ಳಾಲ  ವತಿಯಿಂದ ಸೌಹಾರ್ದ ದೀಪಾವಳಿ ಕಾರ್ಯಕ್ರಮ

ಉಳ್ಳಾಲ:ಪ್ರೆಸ್ ಕ್ಲಬ್ ಉಳ್ಳಾಲ ನೇತೃತ್ವದಲ್ಲಿ ನಡೆದ ತಿಂಗಳ ಬೆಳಕು- ಸೌಹಾರ್ದ ದೀಪಾವಳಿ ಕಾರ್ಯಕ್ರಮದಲ್ಲಿ ಹೊರನಾಡ ಕನ್ನಡಿಗ, ಸಮಾಜಸೇವಕ ಪ್ರವೀಣ್ ಶೆಟ್ಟಿ ಪಿಲಾರ್ ಮೇಗಿನ ಮನೆ, ಇಸ್ಮಾಯಿಲ್ ಕಣಂತೂರು ಬಾಳೆಪಪುಣಿ, ರೀಚಲ್ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸಿರಿಲ್ ರಾಬರ್ಟ್ ಡಿಸೋಜ ಸೇರಿದಂತೆ ಮೂವರು ಸಾಧಕರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆ ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ ರೈ ಹರೇಕಳ ಮಾತನಾಡಿ, ನಂಬಿಕೆಯ ಕ್ರಿಯಾತ್ಮಕ ರೂಪವೇ ಆಚರಣೆ . ನಂಬಿಕೆಯ ನೆಲಗಟ್ಟಿನಲ್ಲಿ ಹಬ್ಬಗಳ ಆಚರಣೆಗಳು ನೆಲೆನಿಂತಿದೆ. ಮತಗಳ ಮಾತ್ರ ಬೇರೆಯಾದರೂ ಧರ್ಮ ಒಂದೇ ಆಗಿದೆ. ಆಧುನಿಕವಾಗಿ ಸಮಾಜ ಬೆಳೆಯುತ್ತಿದ್ದರೂ ಆತ್ಮಜ್ಞಾನ ಅನ್ನುವಂತದ್ದು ಬೆಳೆದಿಲ್ಲ, ಅಂತರಂಗ ಸಂಸ್ಕಾರ ಬೆಳೆಯಬೇಕಿದೆ. ವೈಜ್ಞಾನಿಕತೆಯಿಂದ ಸಾಧ್ಯವಿಲ್ಲ. ಒಳ್ಳೆಯ ಮನಸ್ಸಿನಿಂದ ಸಾಧ್ಯ. ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವ ಹಬ್ಬದಾಚರಣೆಯಲ್ಲಿ ಸಾಧಕರನ್ನು ಗುರುತಿಸುವ ಕಾರ್ಯ ಸಂಸ್ಕಾರಯುತ ಕಾರ್ಯಕ್ರಮವಾಗಿದೆ ಎಂದರು.

ಗೌರವ ಸ್ವೀಕರಿಸಿದ ಪ್ರವೀಣ್ ಶೆಟ್ಟಿ ಮೇಗಿನಮನೆ ಮಾತನಾಡಿ, ಸಮಾಜದಿಂದ ಯಾವುದನ್ನೂ ನಿರೀಕ್ಷಸದೆ ಸೇವೆಯನ್ನು ನಡೆಸುತ್ತಾ ಬಂದಿರುವೆನು. ಸರಳತೆಯಿಂದ ಬದುಕುವುದಷ್ಟೇ ನನ್ನ ಕನಸು. ಜನರ ನಡುವೆ ಗುರುತಿಸಬೇಕು ಎಂದು ಸಹಾಯ ಮಾಡಿದವನಲ್ಲ. ಮಕ್ಕಳಿರುವಾಗ ಬಹಳಷ್ಟು ಕಷ್ಟದ ದಿನಗಳಾಗಿತ್ತು. ಅದೇ ಪ್ರೇರಣೆಯಿಂದ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ನೆಮ್ಮದಿ ಆರೋಗ್ಯವನ್ನು ಕಂಡಿದ್ದೇನೆ. ಕೊರೊನಾ ಸಂದರ್ಭದಲ್ಲಿ ಬಿಲ್ ಪಾವತಿಸಲು ಅಸಾಧ್ಯವಾಗಿ ಆಸ್ಪತ್ರೆಯಲಿ ಬಾಕಿಯುಳಿದಿದ್ದವರನ್ನು ಪತ್ರಕರ್ತರ ಮಾಹಿತಿಯಿಂದ ಬಿಡುಗಡೆಗೊಳಿಸಿದ್ದೇನೆ. ಸಮಾಜಸೇವೆಗೆ ಪತ್ರಕರ್ತರೇ ಸ್ಪೂರ್ತಿಯಾಗಿದ್ದಾರೆ ಎಂದರು.

ಸಿರಿಲ್ ರಾಬರ್ಟ್ ಡಿಸೋಜ ಮಾತನಾಡಿ, ಸಮಾಜಸೇವೆಗೆ ತಾಯಿಯೇ ಪ್ರೇರಣೆ. ನೇರ ನಡೆ, ನುಡಿ ವ್ಯಕ್ತಿತ್ವವನ್ನು ಜೀವನದಲ್ಲಿ ಅನುಸರಿಸುತ್ತಾ, ಗ್ರೂಪ್ ಡಿಸರಕಾರಿ ನೌಕರನಾಗಿದ್ದರೂ, ಕೆಲಸದ ಬಹುಪಾಲು ಸಮಾಜಸೇವೆಯಲ್ಲಿ ಮೀಸಲಿಟ್ಟಿದ್ದೆನು. ಇದೀಗ ನಿವೃತ್ತನಾದ ನಂತರವೂ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಅಶಕ್ತರ ಧ್ವನಿಯಾಗಲು ಬಯಸಿದ್ದೇನೆ. ಶಿವಾಜಿ ಫ್ರೆಂಡ್ಸ್ ಕ್ಲಬ್ ಸಂಘ ತನ್ನ ಬೆನ್ನೆಲುಬಾಗಿ ನಿಂತು ಕ್ರೀಡೆಯಲ್ಲಿ, ತೊಡಗಿಸಿಕೊಳ್ಳಲು ಸಹಕಾರಿಯಾಯಿತು. ಕಬ್ಬಡ್ಡಿ ಪಂದ್ಯಾಟವನ್ನು ಆಯೋಜಿಸುತ್ತಾ ಯುವಕರಲ್ಲಿ ಕ್ರೀಡಾಸ್ಪೂರ್ತಿ ತುಂಬಲು ಸಂಘದ ಜತೆಗೆ ಪತ್ರಕರ್ತರ ಪಾತ್ರವೂ ಮಹತ್ವದ್ದಾಗಿದೆ ಎಂದರು.

ಸಮಾಜಸೇವಕ ಇಸ್ಮಾಯಿಲ್ ಕಣಂತೂರು ಬಾಳೆಪುಣಿ ಮಾತನಾಡಿ, ಗುಜಿರಿ ವ್ಯಾಪಾರಿಯಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಫಲವಾಗಿ ಇಂದು 5 ಕ್ಕೂ ಹೆಚ್ಚಿನ ದೇಶದವರು ಮನೆಗೆ ಬಂದು ಸಂದರ್ಶನ ಪಡೆದುಕೊಂಡಿದ್ದಾರೆ. ಆಂಗ್ಲಭಾಷೆ ಗೊತ್ತಿಲ್ಲದೇ ಇದ್ದರೂ ಒಂಬುಡ್ಸ್ ಮೆನ್ ಸಹಾಯದಿಂದ ಅರ್ಥವನ್ನು ಮಾಡಿಕೊಂಡಿದ್ದೇನೆ. ಕಳೆದುಹೋದ ಚಿನ್ನ, ಕಳವು ನಡೆಸಿದ ಆರೋಪಿಗಳ ಹುಡುಕಾಡುವಲ್ಲಿ, ಅಪಘಾತದ ಸಂದರ್ಭ ಆಸ್ಪತ್ರೆಗೆ ಸೇರಿಸುವ ಕೆಲಸವನ್ನು ಗುಜರಿ ವ್ಯಾಪಾರದೊಂದಿಗೆ ನಿರಂತರವಾಗಿ ನಡೆಸುತ್ತಾ ಬಂದಿರುವೆ. ಬಹುಮುಖ್ಯವಾಗಿ ಪ್ಲಾಸ್ಟಿಕ್ ವಿರೋಧಿ ಆಂದೋಲನದಲ್ಲಿ ಜನಶಿಕ್ಷಣ ಟ್ರಸ್ಟ್ ಜೊತೆಗೆ ಕೈಜೋಡಿಸಿರುವ ನಾನು, ಗುಜರಿ ಹೆಕ್ಕಲು ಮನೆಗಳಿಗೆ ತೆರಳುವ ಸಂದರ್ಭ ಪ್ರತೀ ಮನೆಗಳಲ್ಲಿ ಪ್ಲಾಸ್ಟಿಕ್ ಉರಿಸದಂತೆ, ಉಪಯೋಗಿಸದಂತೆ, ಉಪಯೋಗಿಸಿದ ಪ್ಲಾಸ್ಟಿಕ್ ಅನ್ನು ಸಮರ್ಪಕವಾಗಿ ಜೋಡಿಸಿ ಕಸವಿಲೇವಾರಿ ನಡೆಸುವಂತೆ ಒತ್ತಾಯಿಸುತ್ತಾ ಬಂದಿರುವೆನು ಎಂದರು.

ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಬಶೀರ್ ಕಲ್ಕಟ್ಟ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶಶಿಧರ್ ಪೊಯ್ಯತ್ತಬೈಲ್ ನಿರೂಪಿಸಿದರು. ಉಪಾಧ್ಯಕ್ಷ ದಿನೇಶ್ ನಾಯಕ್ ತೊಕ್ಕೊಟ್ಟು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಸತೀಶ್ ಪುಂಡಿಕಾಯಿ, ಉಪಾಧ್ಯಕ್ಷ ಆರೀಫ್ ಯು.ಆರ್, ಕಾರ್ಯದರ್ಶಿ ಸತೀಶ್ ಕೊಣಾಜೆ ಅತಿಥಿಗಳ ಪರಿಚಯ ಮಾಡಿದರು. ವಜ್ರ ಗುಜರನ್ ವಂದಿಸಿದರು

ಪತ್ರಕರ್ತರಾದ ಸುಪ್ರೀತ್ ಭಂಡಾರಿ, ಆಸೀಫ್ ಬಬ್ಬುಕಟ್ಟೆ, ಶಿವಶಂಕರ್, ಮೋಹನ್ ಕುತ್ತಾರ್, ಅನ್ಸಾರ್ ಇನೋಳಿ, ಅಶ್ವಿನ್ , ಗಂಗಾಧರ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X