Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಗೆ...

ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ26 Sept 2023 9:49 PM IST
share
ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು,ಸೆ.26: ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನರ್‌ಗಳಿಗೂ ಅನ್ವಯಿಸುವಂತೆ ಸರಕಾರ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ ನಿರ್ವಾಹಕರು, ಕ್ಲೀನರ್‌ಗಳು ಈ ಯೋಜನೆಯಡಿ ನೋಂದಣಿ ಮಾಡಿಸಬಹುದು.

*ಯೋಜನೆಯ ಪ್ರಯೋಜನಗಳು: ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದಲ್ಲಿ ಅವರ ನಾಮನಿರ್ದೇಶಿತರಿಗೆ 5 ಲಕ್ಷ ರೂ.ಗಳ ಪರಿಹಾರ, ಶಾಶ್ವತ ದುರ್ಬಲತೆಗೆ 2 ಲಕ್ಷ ರೂ.ಗಳ ವರೆಗೆ ಪರಿಹಾರ, ತಾತ್ಕಾಲಿಕ ದುರ್ಬಲತೆಗೆ 50,000ರೂ. ನಿಂದ, 1ಲಕ್ಷ ರೂ.ಗಳ ವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ಮಾಡಲಾಗುವುದು.

ಶೈಕ್ಷಣಿಕಧನ ಸಹಾಯ: ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನು ಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಾಂಗದವರೆಗೆ ವಾರ್ಷಿಕ 10,000ರೂ.ಗಳ ಶೈಕ್ಷಣಿಕ ಧನಸಹಾಯ.

ಈ ಯೋಜನೆಯಡಿ ಖಾಸಗಿ ವಾಣಿಜ್ಯ ವಾಹನದ ನಿರ್ವಾಹಕರು ಮತ್ತು ಕ್ಲೀನರ್‌ಗಳು ನೋಂದಣಿಯಾಗಲು 20ರಿಂದ 70 ವಷರ್ದೊಳಗಿರಬೇಕು. ಸ್ಟಾಂಪ್ ಸೈಜ್ ಫೋಟೊ 1, ಪಾಸ್ ಪೋರ್ಟ್ ಸೈಜ್ 1, ಆಧಾರ್‌ಕಾರ್ಡ್, ಮಾರ್ಕ್ಸ್ ಕಾರ್ಡ್ (ಎಸ್‌ಎಸ್‌ಎಲ್‌ಸಿ)/ ಡಿ.ಎಲ್/ ಪಾನ್‌ಕಾರ್ಡ್, ಬ್ಯಾಂಕ್‌ಖಾತೆಯ ಪ್ರತಿ, ನಿರ್ವಾಹಕರ ಊರ್ಜಿತ ಪರವಾನಿಗೆ (ಸಾರಿಗೆ ಇಲಾಖೆಯಿಂದ ಪಡೆದಿರತಕ್ಕದ್ದು) (ನಿರ್ವಾಹಕರಿಗೆ ಮಾತ್ರ), ಸಂಸ್ಥೆ/ ಮಾಲಕರಿಂದ ನೀಡಲಾಗಿರುವ ಗುರುತಿನ ಚೀಟಿ(ಲಭ್ಯವಿದ್ದಲ್ಲಿ) ಈ ಎಲ್ಲಾದಾಖಲೆಯೊಂದಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಕಾರ್ಮಿಕ ನಿರೀಕ್ಷಕರುಗಳ ಕಚೇರಿ ದೂ.ಸಂಖ್ಯೆ:0824-2435343, 0824-2433132 ಅನ್ನು ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X