Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ...

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ 2024-25ನೇ ಸಾಲಿನಲ್ಲಿ ರೂ.1159 ಕೋಟಿ ವ್ಯವಹಾರ; 5.05 ಕೋಟಿ (ತಾತ್ಕಾಲಿಕ) ಲಾಭ

ವಾರ್ತಾಭಾರತಿವಾರ್ತಾಭಾರತಿ23 April 2025 2:11 PM IST
share
ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ 2024-25ನೇ ಸಾಲಿನಲ್ಲಿ ರೂ.1159 ಕೋಟಿ ವ್ಯವಹಾರ; 5.05 ಕೋಟಿ (ತಾತ್ಕಾಲಿಕ) ಲಾಭ

ಬಂಟ್ವಾಳ : ಇಲ್ಲಿನ ಬೈಪಾಸ್ ಬಳಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ 1159 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಸುಮಾರು 5.05 ಕೋಟಿ (ತಾತ್ಕಾಲಿಕ) ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು.

ಮಂಗಳವಾರ ಸಂಜೆ ಬ್ಯಾಂಕ್ ಸಭಾಂಗಣದಲ್ಲಿ ಮಾಧ್ಯಮ ಮಂದಿಗೆ ಮಾಹಿತಿ ನೀಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಸಮಾಜ ರತ್ನ ದಿವಂಗತ ಡಾ ಅಮ್ಮೆಂಬಳ ಬಾಳಪ್ಪ ಅವರ ನೇತೃತ್ವದಲ್ಲಿ ಹಾಗೂ ಸಹಕಾರಿ ಧುರೀಣ ಬಿ ಹೂವಯ್ಯ ಮೂಲ್ಯ ಅವರ ಸಾರಥ್ಯದಲ್ಲಿ ಕೇವಲ 131 ಮಂದಿ ಸದಸ್ಯರನ್ನೊಳಗೊಂಡು 22,62/- ರೂಪಾಯಿ ಪಾಲು ಬಂಡವಾಳದೊಂದಿಗೆ ಸ್ಥಾಪಿಸಲ್ಟಟ್ಟ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಪ್ರಸ್ತುತ 16 ಶಾಖೆಗಳನ್ನು ಹೊಂದಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಕಾರ್ಯವ್ಯಾಪ್ತಿ ಹೊಂದಿದೆ. ಸಂಘದ ಪೂಂಜಾಲಕಟ್ಟೆ, ಮುಡಿಪು ಹಾಗೂ ಉಪ್ಪಿನಂಗಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾನಿರ್ವಹಿಸುತ್ತಿದೆ ಎಂದರು.

ಆರ್ಥಿಕ ವರ್ಷ 2024-25ರ ಅಂತ್ಯಕ್ಕೆ ಸಂಘದಲ್ಲಿ 9047 ‘ಎ’ ತರಗತಿ, 5556 ‘ಬಿ’ ತರಗತಿ ಸದಸ್ಯರಿದ್ದು, 8.09 ಕೋಟಿ ರೂಪಾಯಿ ಪಾಲು ಬಂಡವಾಳ ಹೊಂದಿರುತ್ತದೆ. 19.78 ಕೋಟಿ ರೂಪಾಯಿ ನಿಧಿಗಳು, 55.35 ಕೋಟಿ ರೂಪಾಯಿ ವಿನಿಯೋಗಗಳು, 229.47 ಕೋಟಿ ರೂಪಾಯಿ ಠೇವಣಾತಿಗಳು ಇದ್ದು, 215.21 ಕೋಟಿ ರೂಪಾಯಿ ಹೊರಬಾಕಿ ಸಾಲಗಳು ಇರುತ್ತದೆ. ಸಂಘದ ದುಡಿಯುವ ಬಂಡವಾಳ 259.66 ಕೋಟಿ ರೂಪಾಯಿ ಆಗಿರುತ್ತೆ ಎಂದ ಸುರೇಶ್ ಕುಲಾಲ್ ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ‘ಎ’ ತರಗತಿ ಹೊಂದಿರುವ ಸಂಘವು ಸದಸ್ಯರ ಅನುಕೂಲಕ್ಕಾಗಿ ಬಂಟ್ವಾಳ ಬೈಪಾಸ್ ಶಾಖೆಯಲ್ಲಿ ಇ-ಸ್ಟಾಂಪ್ ಸೌಲಭ್ಯವನ್ನು, ಕೆಲವು ಶಾಖೆಗಳಲ್ಲಿ ಸೇಫ್ ಲಾಕರ್ ಸೌಲಭ್ಯಗಳನ್ನು, ಮಣಿಪಾಲ ಆರೋಗ್ಯ ಕಾರ್ಡ್ ಸೌಲಭ್ಯ, ಸದಸ್ಯರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೇತನವನ್ನು, ಯಶಸ್ವಿನಿ ಆರೋಗ್ಯ ರಕ್ಷಣಾ ಸೌಲಭ್ಯ, ಸದಸ್ಯರ ಗಂಭೀರ ಕಾಯಿಲೆಗಳಿಗೆ ಆರ್ಥಿಕ ಸಹಾಯಧನ ಹೀಗೆ ಹಲವಾರು ಸೌಲಭ್ಯಗಳನ್ನು ಸದಸ್ಯರಿಗೆ ನೀಡುತ್ತಾ ಬಂದಿದೆ.

2023-24ನೇ ಸಾಲಿನಲ್ಲಿ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿ ಹಾಗೂ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇವರಿಂದ ಸಾಧನಾ ಪ್ರಶಸ್ತಿ ಪಡೆದುಕೊಂಡಿದ್ದು, ಈಗಾಗಲೇ ಮೂರು ಬಾರಿ ಸಾಧನಾ ಪ್ರಶಸ್ತಿ ಪಡೆದುಕೊಂಡಿದೆ ಎಂದರು.

2025-26 ನೇ ಸಾಲಿನಲ್ಲಿ ನಮ್ಮ ಸಂಘದ ವ್ಯವಹಾರವನ್ನು ವಿಸ್ತರಿಸುವ ಸಲುವಾಗಿ ಮತ್ತು ಸಮಾಜದ ಕಟ್ಟಕಡೆಯ ಹಿಂದುಳಿದ ವ್ಯಕ್ತಿಯು ಆರ್ಥಿಕವಾಗಿ ಸದೃಢರಾಗಬೇಕೆನ್ನುವ ಹಾಗೂ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಆಶಯದೊಂದಿಗೆ ಹೊಸ ಶಾಖೆಯನ್ನು ತೆರೆಯುವ ಇರಾದೆ ಆಡಳಿತ ಮಂಡಳಿಗಿದೆ ಎಂದ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್ ಅವರು ಸಂಘದ ಮೆಲ್ಕಾರ್ ಶಾಖೆಗೆ ಸ್ವಂತ ಕಟ್ಟಡವನ್ನು ಖರೀದಿಸುವ ಪ್ರಸ್ತಾವನೆ ಆಡಳಿತ ಮಂಡಳಿಯ ಮುಂದಿದೆ ಎಂದರು.

ಸಂಘದ ಉಪಾಧ್ಯಕ್ಷ ಜನಾರ್ದನ ಬೊಂಡಾಲ, ಬ್ಯಾಂಕ್ ಸಿಇಒ ಭೋಜ ಮೂಲ್ಯ, ಎಂಜಿಎಂ ಮೋಹನ್ ಎಂ ಕೆ, ನಿರ್ದೇಶಕರಾದ ಅರುಣ್ ಬೋರುಗುಡ್ಡೆ, ರಮೇಶ್ ಸಾಲ್ಯಾನ್, ಅರುಣ್ ಕುಮಾರ್ ಕೆ, ಬಿ ರಮೇಶ್ ಸಾಲ್ಯಾನ್, ಭೋಜ ಸಾಲ್ಯಾನ್, ಕಿರಣ್ ಕುಮಾರ್ ಎ ಅಟ್ಲೂರು, ಪ್ರೇಮನಾಥ ಬಂಟ್ವಾಳ, ಸತೀಶ್ ಪಲ್ಲಮಜಲು, ಹರೀಶ್ ಜಾರಬೆಟ್ಟು, ಮಾಲತಿ ಮಚೇಂದ್ರ, ಜಗನ್ನಿವಾಸ ಗೌಡ ಮೊದಲಾದವರು ಈ ಸಂದರ್ಭ ಜೊತೆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X