Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾ ಆಡಳಿತದ ವಿರುದ್ಧ ‘ನಾಗರಿಕರ ಆರೋಪ...

ಮನಪಾ ಆಡಳಿತದ ವಿರುದ್ಧ ‘ನಾಗರಿಕರ ಆರೋಪ ಪಟ್ಟಿ’: ಮಂಗಳೂರು ನಗರ ಪೌರ ಸಮಿತಿಯಿಂದ ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Feb 2025 1:39 PM IST
share
ಮನಪಾ ಆಡಳಿತದ ವಿರುದ್ಧ ‘ನಾಗರಿಕರ ಆರೋಪ ಪಟ್ಟಿ’: ಮಂಗಳೂರು ನಗರ ಪೌರ ಸಮಿತಿಯಿಂದ ವಿನೂತನ ಪ್ರತಿಭಟನೆ

ಮಂಗಳೂರು, ಫೆ.25: ಕಳೆದ ಐದು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನಾಗರಿಕರನ್ನು ದುಸ್ವಪ್ನದಂತೆ ಬಿಜೆಪಿ ಕಾಡಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಮಂಗಳೂರು ನಗರ ಪೌರ ಸಮಿತಿಯಿಂದ ಮಂಗಳವಾರ ಲಾಲ್ ಬಾಗ್ನ ಪಾಲಿಕೆ ಕಚೇರಿ ಎದುರು ಐದು ವರ್ಷಗಳ ಬಿಜೆಪಿ ದುರಾಡಳಿತದ ವಿರುದ್ಧ ‘ನಾಗರಿಕ ಆರೋಪ ಪಟ್ಟಿ’ (ಸಿಟಿಝನ್ ಚಾರ್ಜ್ ಶೀಟ್) ಎಂಬ ವಿನೂತನ ಪ್ರತಿಭಟನೆಯಲ್ಲಿ 16 ಪ್ರಮುಖ ಆರೋಪಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

ಈ ಹಿಂದೆ ಕಾಂಗ್ರೆಸ್ ನ ಭ್ರಷ್ಟಾಚಾರ ಆಡಳಿತ ಮುಂದಿಟ್ಟು ಭ್ರಷ್ಟಾಚಾರರಹಿತ, ಸ್ವಯಂ ಘೋಷಿತ ಆಸ್ತಿ ತೆರಿಗೆ ಹಾಗದೆ ಅಭಿವೃದ್ದಿ ಮಾಡುವುದಾಗಿ ಹೇಳಿತ್ತು. ಆದರೆ ಈವರೆಗಿನ ಅತೀ ಹೆಚ್ಚು ಭ್ರಷ್ಟ, ಜನ ವಿರೋಧಿ ದುರಾಡಳಿತವನ್ನು ಬಿಜೆಪಿ ಈ ಅವಧಿಯಲ್ಲಿ ನಡೆಸಿದೆ. ಸ್ವಯಂ ಘೋಷಿತ ಆಸ್ತಿ ತೆರಿಗೆ ವಿರೋಧಿಸಿದವರೇ ಇಂದು ಹೆಚ್ಚಿಸಿ ಪಡೆಯುತ್ತಿದ್ದಾರೆ. ಹಿಂದಿನ 12 ವರ್ಷಗಳಲ್ಲಿ ಆಗದ ನೀರಿನ ದರ ಏರಿಕೆ ಬಿಜೆಪಿ ಆಡಳಿತ ಅವಧಿಯಲ್ಲಾಗಿದೆ. ಹಿಂದಿನ ಅವಧಿಯಲ್ಲಿ ಇಡ್ಯಾದಲ್ಲಿ ಆರಂಭಿಸಲಾದ ಬಡವರಿಗೆ ವಸತಿ ಯೋಜನೆಗಾಗಿನ ಜಿ+3 ಮಾದರಿಯ 650 ಮನೆಗಳು ಪಾಳುಬಿದ್ದಿವೆ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ಟಿಡಿಆರ್ ಹಗರಣ ನಡೆಸಲಾಗಿದೆ. ಪಚ್ಚನಾಡಿ, ಮರಕಡದ ಟಿಡಿಆರ್ ಹಗರಣಗಳನ್ನು ನಾವು ವಿರೋಧಿಸಿದರೂ ಇದೀಗ ಪದವು ಎಂಬಲ್ಲಿ 3.5 ಎಕರೆ ಭೂಮಿಯನ್ನು ಟಿಡಿಆರ್ನಡಿ ಬಡವರಿಗೆ ವಸತಿ ಯೋಜನೆಯ ನೆಪದಲ್ಲಿ ಪಡೆಯಲಾಗಿದೆ. 24 ಗಂಟೆ ನೀರು ಕೊಡುವ ಜಲಸಿರಿ ಯೋಜನೆ ಕಳೆದ ಐದು ವರ್ಷಗಲಿಂದ ಪೂರ್ಣಗೊಂಡಿಲ್ಲ. ಈ ಯೋಜನೆಯ ಮೂಲಕ ನೀರಿನ ವ್ಯವಸ್ಥೆಯನ್ನೇ ಖಾಸಗೀಕರಣಗೊಳಿಸುವ ಹುನ್ನಾರ ನಡೆಸಲಾಗಿದೆ. 750 ಕೋಟಿ ರೂ.ಗಳನ್ನು ಏಷ್ಯನ್ ಡೆವಲಪ್ ಮೆಂಟ್ನಿಂದ ಸಾಲ ಪಡೆದು ನಾಗರಿಕರ ಮೇಲೆ ಸಾಲದ ಹೊರೆ ಹಾಕಲಾಗಿದೆ. ಯುಜಿಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೆಲ್ಲಾ ಸಾಲದು ಎಂಬಂತೆ ತಾವು ಜನಪ್ರತಿನಿಧಿಗಳು ಎಂಬುದ್ನನು ಮರೆತು ಕಾರ್ಪೊರೇಟರ್ ಗಳು ದುರಾಹಂಕಾರದಿಂದ ವರ್ತಿಸುತ್ತಿದ್ದಾರೆ. ಬಿಜೆಪಿ ಶಾಸಕರು ಆಡಳಿತದಲ್ಲಿ ಹಸ್ತಕ್ಷೇಪ ತೋರುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಮಂಗಳೂರು ನಗರ ಪೌರ ಸಮಿತಿ ಜನಸಾಮಾನ್ಯರ ಪರ ಆಡಳಿತ ತರುವ ಪ್ರಯತ್ನದಲ್ಲಿ ತೊಡಗಿದೆ ಎಂದರು.

ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಕಳೆದ ಐದು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಟಿಡಿಆರ್ ಹಗರಣ, ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಸಾವಿರಾರು ಕೋಟಿ ರೂ. ನುಂಗಿದ್ದು, ಜಲಸಿರಿ ಹಾಗೂ ವಸತಿ ಯೋಜನೆಯಯನ್ನು ಕಾರ್ಯಗತಗೊಳಿಸದೆ ಜನರಿಗೆ ಮೋಸ ಮಾಡಿದ್ದಾರೆ. ಬಿಜೆಪಿ ಆಡಳಿತ ಜನವಿರೋಧಿ ನೀತಿಗಳ ಮೂಲಕ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ವನಾಶ ಮಾಡುತ್ತಾರೆ. ಈ ಬಾರಿ ಜನತೆ ಪಾಠ ಕಲಿಸಬೇಕಾಗಿದೆ ಎಂದು ಅವರು ಹೇಳಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ. ಶೇಖರ್, ಆಮ್ ಆದ್ಮಿ ಪಕ್ಷದ ಜಿಲ್ಲಾ ಮುಖಂಡ ಎಸ್.ಎಲ್. ಪಿಂಟೋ ಮೊದಲಾದವರು ಮಾತನಾಡಿ, ಮನಪಾದ ಬಿಜೆಪಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಮ್ ಆದ್ಮಿಯ ವಿಶು ಕುಮಾರ್, ಸಿಪಿಎಂ ಯಾದವ ಶೆಟ್ಟಿ, ಜಯಂತಿ ಶೆಟ್ಟಿ, ಬಿ.ಕೆ.ಇಮ್ತಿಯಾಝ್, ಸಿಪಿಐ ವಿ. ಕುಕ್ಯಾನ್, ಸೀತಾರಾಂ ಬೆರಿಂಜ, ದಸಂಸದ ಸದಾಶಿವ, ಸಿಪಿಎಂನ ಜೆ.ಬಾಲಕೃಷ್ಣ ಶೆಟ್ಟಿ. ಪ್ರೊ.ಕಿಶೋರ್ ಅತ್ತಾವರ, ಭಾರತಿ ಬೋಳೂರು, ಜಯಂತಿ ಬಿ. ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಗೂ ಮೊದಲು ವಿವಿಧ ಸಂಘಟನೆ, ಪಕ್ಷಗಳನ್ನು ಒಳಗೊಂಡ ಮಂಗಳೂರು ನಗರ ಪೌರ ಸಮಿತಿಯ ನೇತೃತ್ವದಲ್ಲಿ ಪಿವಿಎಸ್ ಜಂಕ್ಷನ್ನಿಂದ ಲಾಲ್ ಬಾಗ್ ವರೆಗೆ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X