Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾವೈಕ್ಯತೆಯ ದೀಪಾವಳಿ ಆಚರಣೆಗೆ ದಶಮಾನದ...

ಭಾವೈಕ್ಯತೆಯ ದೀಪಾವಳಿ ಆಚರಣೆಗೆ ದಶಮಾನದ ಸಂಭ್ರಮ: ಅ. 31ರಂದು ವಿವಿಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ19 Oct 2024 1:18 PM IST
share
ಭಾವೈಕ್ಯತೆಯ ದೀಪಾವಳಿ ಆಚರಣೆಗೆ ದಶಮಾನದ ಸಂಭ್ರಮ: ಅ. 31ರಂದು ವಿವಿಧ ಸ್ಪರ್ಧೆ

ಮಂಗಳೂರು, ಅ.19: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಆಚರಿಸಲಾಗುವ ಸರ್ವಧರ್ಮಗಳ ಭಾವೈಕ್ಯದ ದೀಪಾವಳಿ ಆಚರಣೆ ದಶಮಾನ ಸಂಭ್ರಮದಲ್ಲಿದೆ. ಇದರ ಅಂಗವಾಗಿ ಅ. 31ರಂದು ಕುಣಿತ ಭಜನೆ, ಗೂಡುದೀಪ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಐವನ್ ಡಿಸೋಜಾ, ಕದ್ರಿ ಪರ್ಕ್‌ಿನ ಸುವರ್ಣ ಕಲಾ ಮಂಟದಲ್ಲಿ ಅ. 31ರಂದು ಸಂಜೆ 3 ಗಂಟೆಯಿಂದ ಚಿತ್ರಕಲಾ ಸ್ಪರ್ಧೆ, ಗೂಡುದೀಪ ಸ್ಪರ್ಧೆ ಹಾಗೂ ಕುಣಿತ ಭಜನೆ ಆಯೋಜಿಸಲಾಗಿದೆ ಎಂದರು.

ಸಂಜೆ 3 ಗಂಟೆಗೆ ನಾಲ್ಕು ಶ್ರೇಣಿಗಳಲ್ಲಿ ಚಿತ್ರಕಲಾ ಸ್ಪರ್ಧೆ ಹಾಗೂ ಆಧುನಿಕ ಮತ್ತು ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ನಡೆಯಲಿದೆ. ಸಂಜೆ 4.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಕುಣಿತ ಭಜನೆಯ ಸ್ಪರ್ಧೆ ನಡೆಯಿದೆ. ಕಳೆದ ವರ್ಷ ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಅವರು ಹೇಳಿದರು.

ಕುಣಿತ ಭಜನೆ ಸ್ಪರ್ಧೆಯ ಪ್ರತಿ ತಂಡದಲ್ಲಿ 10 ಜನರಿಗಿಂತ ಮೇಲಿರಬಾರದು. 20 ನಿಮಿಷಗಳ ಕಾಲಾವಕಾಶ ನೀಡಲಾಗುತ್ತಿದ್ದು, ಪ್ರಥಮ ಬಹುಮಾನ 15,000 ರೂ., ದ್ವಿತೀಯ 10,000 ರೂ. ಹಾಗೂ ತೃತೀಯ 5000 ರೂ. ಹಾಗೂ ಭಾಗವಹಿಸುವ ಎಲ್ಲಾ ತಂಡಗಳಿಗೆ 1000 ರೂ. ಗೌರವ ಸಂಭಾವನೆ ನೀಡಲಾಗುವುದು.

ಚಿತ್ರಕಲಾ ಸ್ಪರ್ಧೆಯಲ್ಲಿ ದೀಪಾವಳಿಯ ವೈಶಿಷ್ಯದ ಬಗ್ಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರಾಥಮಿಕ, ಹೈಸ್ಕೂಲ್, ಪಿಯುಸಿ ಪದವಿ ಹಾಗೂ ಮೇಲ್ಪಟ್ಟ ವಯೋಮಾನದವರಿಗೆ ಮುಕ್ತ ಅವಕಾಶ. 45 ನಿಮಿಷಗಳ ಕಾಲಾವಕಾಶ ಇರಲಿದೆ. ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ 3000 ರೂ., ಹಾಗೂ ತೃತೀಯ 2000 ರೂ. ಬಹುಮಾನ ವಿರಲಿದ್ದು, ಪದಕ ಮತ್ತು ಪ್ರಮಾಣ ಪತ್ರ ನೀಡಲಾಗುವುದು.

ಗೂಡುದೀಪ ಸ್ಪರ್ಧೆಯು ಆಧುನಿಕ ಮತ್ತು ಸಾಂಪ್ರದಾಯಿಕ ವಿಭಾಗದಲ್ಲಿ ನಡೆಯಲಿದ್ದು, ಸ್ಪರ್ಧೆಯು ಕದ್ರಿ ಪಾರ್ಕಿನ ಒಳಗಡೆ ನಡೆಯಲಿರುವುದು ಹಾಗೂ ಈ ವರ್ಷ ದಶಮಾನೋತ್ಸವ ಅಂಗವಾಗಿ ಸುಮಾರು 300 ಗೂಡುದೀಪಗಳು ಭಾಗವಹಿಸುವ ನಿರೀಕ್ಷೆ ಇದೆ.

ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ 7000 ರೂ., ದ್ವಿತೀ, 5000 ರೂ., ಹಾಗೂ ತೃತೀಯ 3000 ರೂ. ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ತಂಡಗಳಿಗೆ ಗೌರವಧನ ಹಾಗೂ ಸಮಧಾನಕರ ಬಹುಮಾನ ನೀಡಲಾಗುವುದು ಎಂದು ಅವರು ವಿವರಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಜಿ. ನಾಗೇಂದ್ರ ಕುಮಾರ್ ಸಂಚಾಲಕತ್ವದಲ್ಲಿ ಸಮಿತಿ ರಚಿಸಲಾಗಿದೆ. ಚಿತ್ರಕಲಾ ಸ್ಪರ್ಧೆ ನೋಂದಣಿಗೆ ಪ್ರಗತಿ ಬೇಕಲ್ (9686261829), ಮೀನಾ ಟೆಲ್ಲಿಸ್(7022436831), ಬಬಿತಾ ಡಿ ಸೋಜ, ವಿದ್ಯಾ ತೋರಸ್, ವಿದ್ಯಾ ಅತ್ತಾವರ ಹಾಗೂ ಗೂಡುದೀಪ ಸ್ಪರ್ಧೆ ನೊಂದಾವಣೆಗಾಗಿ ಮಹೇಶ್ ಕೋಡಿಕಲ್ (9743597991), ವಿಕಾಸ್ ಶೆಟ್ಟಿ(9916021942), ಮನೀಶ್ ಬೋಳಾರ್, ಕುಣಿತ ಸ್ಪರ್ಧೆ ನೊಂದಾವಣಿಗಾಗಿ ಚಂದ್ರಹಾಸ್ ಕುಲಾಲ್(9964818276), ಭಾಸ್ಕರ್ ರಾವ್‌ರ ನ್ನು ಸಂಪರ್ಕಿಸಬಹುದಾಗಿದೆ. ಅ. 28 ನೋಂದಣಿಗೆ ಕೊನೆಯ ದಿನವಾಗಿರುತ್ತದೆ.

ಗೋಷ್ಟಿಯಲ್ಲಿ ಜೆ. ನಾಗೇಂದ್ರ ಕುಮಾರ್, ಸತೀಶ್ ಪೆಂಗಲ್, ಭಾಸ್ಕರ್ ರಾವ್, ಚಂದ್ರಹಾಸ್ ಕುಲಾಲ್, ಪ್ರಗತಿ ಬೇಕಲ್, ಮನೀಶ್ ಬೋಳಾರ, ಸಿರಾಜ್ ಬಜಪೆ, ಮನೋರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X