ದೇಶವನ್ನು ದುರ್ಬಲಗೊಳಿಸುವ ಶಕ್ತಿಗಳನ್ನು ಮಟ್ಟಹಾಕಬೇಕು:

ಮಂಗಳೂರು,ಎ.27; ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಕೃತ್ಯ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ದೇಶವನ್ನು ದುರ್ಬಲಗೊಳಿಸುವ ಶಕ್ತಿಗಳ ತಂತ್ರವಾಗಿದೆ. ಇಂತಹ ಶಕ್ತಿಗಳನ್ನು ಮಟ್ಟಹಾಕಬೇಕು ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
ಅವರು ರವಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಕಾಶ್ಮೀರದಲ್ಲಿ ಉಗ್ರಗಾಮಿಗಳು ಪ್ರವಾಸಿಗರ ಮೇಲೆ ನಡೆಸಿದ ದಾಳಿಯ ಬಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ಜನರು ಈ ಸಂದರ್ಭದಲ್ಲಿ ಒಗ್ಗಟ್ಟಿನಲ್ಲಿರಬೇಕಾಗಿದೆ. ಕೇಂದ್ರ ಸರಕಾರ ಎಲ್ಲಾ ವಿಪಕ್ಷಗಳನ್ನು ಕರೆದು ತೀರ್ಮಾನಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.
ವಿಧಾನ ಸಭೆಯ ಕಲಾಪದ ಸಂದರ್ಭದಲ್ಲಿ 18ಶಾಸಕರನ್ನು 6ತಿಂಗಳ ಕಾಲ ಅಮಾನತು ಮಾಡಿರುವ ಕ್ರಮದ ಬಗ್ಗೆ ಮರು ಪರಶೀಲನೆಗೆ ವಿಪಕ್ಷ ನಾಯಕರ ಮನವಿ ಬಂದಿದೆ. ಸಂವಿಧಾನದ ಪೀಠಕ್ಕೆ ಅಗೌರ ತೋರಿದ ಹಿನ್ನೆಲೆಯಲ್ಲಿ ಸದನದಲ್ಲಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಸದನದಲ್ಲಿ ಮಾತ್ರ ಮರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಅವಕಾಶವಿದ್ದು, ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮ ಕೈಗೊಳ್ಳಲು ಕೆಲವು ಶಾಸಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಿವಿಲೇಜ್ ಕಮಿಟಿಗೆ ಶಿಫಾರಸು ಮಾಡಲಾಗಿದೆ.ಶಾಸಕರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳಲು ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಸಮಿತಿ ತೀರ್ಮಾನದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.