Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೂ: 29-30: ಕದ್ರಿ ಕಂಬಳದಲ್ಲಿ...

ಜೂ: 29-30: ಕದ್ರಿ ಕಂಬಳದಲ್ಲಿ ಮಾವು-ಹಲಸು ಮೇಳ

ವಾರ್ತಾಭಾರತಿವಾರ್ತಾಭಾರತಿ26 Jun 2024 2:57 PM IST
share
ಜೂ: 29-30: ಕದ್ರಿ ಕಂಬಳದಲ್ಲಿ ಮಾವು-ಹಲಸು ಮೇಳ

ಮಂಗಳೂರು,ಜೂ.26: ಸಾವಯವ ಕೃಷಿಕರೇ ಬೆಳೆಸಿರುವ ವಿಶಿಷ್ಟ ತಳಿಗಳ ಸಮೃದ್ಧ ಫಲಗಳಾದ ಮಾವು - ಹಲಸು ಮೇಳ ಜೂನ್ 29 ಹಾಗೂ 30ರಂದು ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯಲ್ಲಿರುವ ಮಂಜು ಪ್ರಸಾದದ ಆವರಣದಲ್ಲಿ ಏರ್ಪಡಿಸಲಾಗಿದೆ. ಎಂದು ಆಯೋಜಕರಾದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಮಾತನಾಡಿದ ಅವರು, ನಾಡು ನುಡಿ ಜಾಗೃತಿ ಸಮ್ಮೇಳನ ಸರಣಿ ಕಾರ್ಯಕ್ರಮದ ಅಂಗವಾಗಿ ಕಲ್ಕೂರ ಪ್ರತಿಷ್ಠಾನವು ಮಂಗಳೂರಿನ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಮಾವು ಹಲಸು ಮೇಳವನ್ನು ಹಿರಿಯ ಸಾಮಾಜಿಕ ಕಾರ್ಯಕರ್ತೆ ಹಾಗೂ ಕದ್ರಿ ಫಲಪುಷ್ಪ ಪ್ರದರ್ಶನದ ಗೌರವಾಧ್ಯಕ್ಷೆ ಆರೂರು ಲಕ್ಷ್ಮೀ ರಾವ್ ಉದ್ಘಾಟಿಸಲಿರುವರು

ಅವರು ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣರು ದೀಪ ಬೆಳಗುವ ಮೂಲಕ ಶುಭ ಹಾರೈಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಕೃಷಿ ತಜ್ಞ ಪಡ್ರೆ ಉದ್ಯಮಿ ಎ.ಜೆ. ಶೆಟ್ಟಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕಾರ್ಪೋರೇಟರ್‌ಗಳಾದ ಶಶಿಧರ ಹೆಗ್ಡೆ, ಶಕಿಲಾ ಕಾವ, ಮನೋಹರ ಶೆಟ್ಟಿ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಶರವು ರಾಘವೇಂದ್ರ ಶಾಸ್ತ್ರಿ, ಡಾ. ಹರಿಕೃಷ್ಣ ಪುನರೂರು, ಡಾ.ಎಂ.ಬಿ. ಪುರಾಣಿಕ್, ಕ್ಯಾ.ಗಣೇಶ್ ಕಾರ್ಣಿಕ್, ಡಾ. ಜೀವರಾಜ್ ಸೊರಕೆ, ರಘುನಾಥ ಸೋಮಯಾಜಿ, ಪ್ರಕಾಶ್ ಕಲ್ಬಾವಿ, ರತ್ನಾಕರ ಜೈನ್, ಪತ್ರಕರ್ತ ಎ.ಆರ್. ಸುಬ್ಬಯ್ಯಕಟ್ಟೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್, ಮಂಗಳೂರು ಪ್ರೆಸ್ ಕ್ಲಬ್‌ನ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ತುಮುಡಿ ಸೂರ್ಯನಾರಾಯಣ ರಾವ್ ಮೊದಲಾದವರು ಭಾಗವಹಿಸಲಿರುವರು

ಸಾವಯವ ಕೃಷಿಕರಿಗೆ ಸನ್ಮಾನ : ಬೆಂಗಳೂರು ಗ್ರಾಮಾಂತರ ಪ್ರದೇಶದ ತೂಗುಕೆರೆಯ ಕೃಷಿಕ ಹಲಸು ಹಾಗೂ ಹೂವಿನ ಬೆಳೆಗಾರ ಮುನಿರಾಜು ಹಾಗೂ ಅರಸಿಕೆರೆಯ ಮಾವು ಬೆಳೆಗಾರ ರಘು ಇವರನ್ನು ಸನ್ಮಾನಿಸಲಾಗುವುದು.

ರಾಮನಗರ, ಮಂಡ್ಯ, ಮೈಸೂರು, ಬೆಳಗಾಂ ಹಾಗೂ ಸ್ಥಳೀಯ ಕೃಷಿಕರು ಭಾಗವಹಿಸಲಿದ್ದಾರೆ. ರುದ್ರಾಕ್ಷ, ಚಂದ್ರಬರ್ಕೆ ಮತ್ತಿತರ ವಿವಿಧ ತಳಿಯ ಹಲಸು, ಮಾವಿನ ಹಣ್ಣುಗಳಾದ ಮಲ್ಲಿಕಾ, ಮತ್ತೋವ, ನೀಲಂ, ಕಾಳಪಾಡಿ, ಬಾದಾಮಿ, ತೋತಾಪುರಿ ಲಭ್ಯವಿರುತ್ತದೆ. ಮಾವು ಹಲಸಿನಿಂದ ತಯಾರಿಸಿದ ಮೌಲ್ಯವರ್ಧಿತ ಸ್ವಾವಲಂಬಿ ಖಾದ್ಯಗಳಾದ ಹಲಸಿನ ಕಬಾಬ್, ಹಲಸಿನ ಗಾರಿಗೆ, ಚಿಪ್ಸ್, ಉಂಡ್ಳಕ್ಕ, ಹಲಸಿನ ಪಾವುಬಾಜಿ, ಕಡುಬು, ಹಲಸಿನ ಕೇಕ್, ಹೋಳಿಗೆ, ಹಪ್ಪಳ, ಉಪ್ಪಿನಕಾಯಿ, ಐಸ್‌ಕ್ರೀಂ ಇತ್ಯಾದಿಗಳಲ್ಲದೆ, ವಿವಿಧ ಮಾವು ಹಲಸಿನ ಗಿಡಗಳು, ದೇಸಿ ತರಕಾರಿ ಬೀಜಗಳು, ಸಸಿಗಳು, ಕೃಷಿಗೆ ಸಂಬಂಧಿಸಿದ ಉಪಕರಣಗಳು ಹಾಗೂ ಕೃಷಿ ಸಾಹಿತ್ಯ ಕೃತಿಗಳು ಒಟ್ಟು 40 ಸ್ಟಾಲ್‌ಗಳು ಲಭ್ಯವಿರಲಿವೆ ಎಂದು ಎಸ್. ಪ್ರದೀಪ್ ಕುಮಾರ ಕಲ್ಕೂರ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಾವಯವ ಕೃಷಿಕ ಗ್ರಾಹಕ ಬಳಗದ ರತ್ನಾಕರ ಕುಳಾಯಿ, ಪ್ರಮುಖರಾದ ಶಿವಪ್ರಸಾದ್ ಪ್ರಭು, ಜನಾರ್ದನ ಹಂದೆ, ಡಾ. ಮಂಜುಳಾ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X