ಮುಲ್ಕಿ: ಎಮ್.ಕೆ. ಅಮಾನುಲ್ಲಾ ನಿಧನ
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಬಸರಿಕಟ್ಟೆ ಮನೆತನದ ನಿವಾಸಿ ಎಮ್.ಕೆ. ಅಮಾನುಲ್ಲಾ(65) ಹೃದಯಾಘಾತದಿಂದ ಸೋಮವಾರ ಬೆಳಗ್ಗೆ ಮನೆಯಲ್ಲಿ ನಿಧನರಾದರು.
ಅವರು ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಅಮಾನುಲ್ಲಾ ಅವರು ಮುಲ್ಕಿ ಜಮಾತ್ ಉಪಾಧ್ಯಕ್ಷರಾಗಿ, ಉದ್ಯಮಿಯಾಗಿ ಹಿಂದುಸ್ತಾನ್ ಮೆರಿನ್ ಪ್ರಾಡಕ್ಟ್ ನ ಪಾಲುದಾರರಾಗಿ, ಕೊಡುಗೈದಾನಿಯಾಗಿ, ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ, ಮಾಜಿ ಸಚಿವ ರಮಾನಾಥ ರೈ, ಅಭಯ ಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ , ಇನಾಯತ್ ಅಲಿ, ಮಾಜಿ ಶಾಸಕ ಮೊಯ್ದಿನ್ ಬಾವ, ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬರ್ನಾಡ್, Expertise ಸಂಸ್ಥೆಯ ಉಪಾಧ್ಯಕ್ಷ ಶೇಖ್ ಕರ್ನಿರೆ, ಸಿಇಒ ಆಸಿಫ್ ಕರ್ನಿರೆ, ಮುಲ್ಕಿ ಜಮಾತ್ ಕಮಿಟಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story