ಪುತ್ತೂರು: ಯುವ ಕಾಂಗ್ರೆಸ್ ಮುಖಂಡ ಹೃದಯಾಘಾತದಿಂದ ನಿಧನ
ಪುತ್ತೂರು: ಯುವ ಕಾಂಗ್ರೆಸ್ ಮುಖಂಡ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿನ ನಿವಾಸಿ ಪ್ರಕಾಶ್ ಪುರುಷರಕಟ್ಟೆ ಹೃದಯಾಘಾತದಿಂದ ಮಂಗಳವಾರ ಸಂಜೆ ನಿಧನರಾದರು.
ಸಂಜೆ ವೇಳೆ ಮನೆಯಲ್ಲಿದ್ದ ಸಂದರ್ಭದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಯುವ ಕಾಂಗ್ರೆಸ್ ಮುಖಂಡ ಪ್ರಕಾಶ್ ಪುರುಷರಕಟ್ಟೆ ನಿಧನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಸಂಯೋಜಕ ಅಮಳ ರಾಮಚಂದ್ರ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
Next Story