ದ.ಕ.ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ: ಹವಾಮಾನ ಇಲಾಖೆ
ಮಂಗಳೂರು, ಅ.12: ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಂಡ ಕಾರಣ ದ.ಕ.ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಉಪ್ಪಿನಂಗಡಿ, ಮಂಗಳೂರು ಸಹಿತ ಬಹುತೇಕ ಕಡೆ ಶನಿವಾರ ಸಾಮಾನ್ಯ ಮಳೆಯಾಗಿದೆ. ದಿನವಿಡೀ ಮೋಡ ಮುಸುಕಿದ, ತಂಪಗಿನ ವಾತಾವರಣವಿತ್ತು.
ಅಕ್ಟೋಬರ್ 17ರ ತನಕ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Next Story