ಮಾಣಿ ಬಾಲವಿಕಾಸ ಶಾಲೆಯ ಮುಖ್ಯಶಿಕ್ಷಕಿ ಸುಪ್ರಿಯಾರಿಗೆ ರಾಜ್ಯಮಟ್ಟದ 'ವಿದ್ಯಾರತ್ನ' ಪ್ರಶಸ್ತಿ
ಬಂಟ್ವಾಳ: ಅನುದಾನರಹಿತ ಖಾಸಗಿ ಶಾಲೆಗಳ ಸಂಘ (RUPSA) ನೀಡುವ ರಾಜ್ಯ ಮಟ್ಟದ 'ವಿದ್ಯಾರತ್ನ' ಪ್ರಶಸ್ತಿಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ.
ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರಿಯಾ ಪ್ರಶಸ್ತಿ ಸ್ವೀಕರಿಸಿದರು.
ಇವರು ಮಂಗಳೂರಿನ ಜೆಪ್ಪು ನಿವಾಸಿ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಸಂತ ಕುಮಾರ್ ರ ಪತ್ನಿ.
Next Story