Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ...

ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ಗೊಂದಲ| ಪಿ.ಎ. ಕಾಲೇಜಿನಿಂದ ಯಾವುದೇ ತಪ್ಪು ನಡೆದಿಲ್ಲ: ಆಡಳಿತ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ11 Dec 2024 6:57 PM IST
share
ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ಗೊಂದಲ| ಪಿ.ಎ. ಕಾಲೇಜಿನಿಂದ ಯಾವುದೇ ತಪ್ಪು ನಡೆದಿಲ್ಲ: ಆಡಳಿತ ಮಂಡಳಿ

ಮಂಗಳೂರು: ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ವಿಚಾರ, ಹಾಲ್ ಟಿಕೆಟ್ ನಿರಾಕರಣೆ ಎನ್ನುವ ಆರೋಪ ದಲ್ಲಿ ಯಾವುದೇ ಹುರುಳಿಲ್ಲ, ಈ ವಿಚಾರದಲ್ಲಿ ನಮ್ಮ ಸಂಸ್ಥೆಯಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಕೊಣಾಜೆಯ ಪಿ.ಎ.ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

2021ರ ಮೊದಲು ವಿದ್ಯಾರ್ಥಿಗಳಿಂದ ಕಾಲೇಜಿನಲ್ಲೇ ಪರೀಕ್ಷಾ ಶುಲ್ಕ ಪಡೆದು ಬಳಿಕ ವಿಶ್ವವಿದ್ಯಾಲಯಕ್ಕೆ ಪಾವತಿ ಮಾಡುವ ಪದ್ದತಿ ಇತ್ತು. ಹೊಸ ಶಿಕ್ಷಣ ನೀತಿ ಜಾರಿಗೆ ಬಂದಿದ್ದರಿಂದ ಯುಯುಸಿಎಂಎಸ್ ತಂತ್ರಾಂಶದ ಮೂಲಕ ವಿದ್ಯಾರ್ಥಿ ಗಳೇ ನೇರವಾಗಿ ಶುಲ್ಕ ಪಾವತಿಸಬೇಕಾಗಿದೆ. ಬೆಂಗಳೂರಿನಲ್ಲಿ ಇದರ ನಿರ್ವಹಣೆ ವ್ಯವಸ್ಥೆ ಇದ್ದು ನಮ್ಮ ಸಂಸ್ಥೆ ಅಥವಾ ಮಂಗಳೂರು ವಿಶ್ವವಿದ್ಯಾನಿಲಯ ಏನೂ ಮಾಡುವಂತಿಲ್ಲ ಎಂದು ಪಿ.ಎ.ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲ ಡಾ.ಸರ್ಫ್ರಾಝ್ ಜೆ. ಹಾಶಿಂ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ನಮ್ಮ ಸಂಸ್ಥೆಯಲ್ಲಿ 768 ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದು, 27 ವಿದ್ಯಾರ್ಥಿಗಳಿಗೆ ಇನೀಷಿಯೇಟ್ ಎಂದು ಬಂದಿದೆ. ಇಂಥ ಸಮಸ್ಯೆ ಮಂಗಳೂರು ವಿಶ್ವವಿದ್ಯಾನಿಲಯದ ಮೂರು ಸಾವಿರ ವಿದ್ಯಾರ್ಥಿಗಳಿಗೆ ಆಗಿದೆ ಎಂದು ಅಧಿಕಾರಿಗಳೇ ತಿಳಿಸಿದ್ದರು ಎಂದರು.

ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಹರಸಾಹಸಪಟ್ಟಿದೆ. ಇನಿಷಿಯೇಟ್ ಬಂದ ವಿದ್ಯಾರ್ಥಿಗಳಿಗೆ ಮತ್ತೆ ಶುಲ್ಕ ಪಾವತಿಸಲು ಸೂಚಿಸಿದ್ದರಿಂದ ನಮ್ಮ ವಿದ್ಯಾರ್ಥಿಗಳಿಗೂ ಇದನ್ನೇ ಹೇಳಿದ್ದೆವು. ಆದರೆ ಒಬ್ಬ ಮಾತ್ರ ಎರಡನೇ ಬಾರಿ ಶುಲ್ಕ ಪಾವತಿಸಿದ್ದರೆ ಇತರ 26 ವಿದ್ಯಾರ್ಥಿಗಳು ಪಾವತಿಸಲು ಮುಂದಾಗಿಲ್ಲ. ಈ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಹೋದಾಗ ಅವರೂ ಮನವರಿಕೆ ಮಾಡಿದ್ದಾರೆ. ಅಲ್ಲಿಂದ ಮತ್ತೆ ಕಾಲೇಜಿಗೆ ಬಂದಾಗ ನಾವೂ ವಿವರಿ ಸಿದ್ದೆವು. ಆದರೂ ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಹೋಗ್ತೇವೆ ಎಂದು ಹೋಗಿದ್ದಾರೆ. ಕೊಣಾಜೆ ಠಾಣೆಯಲ್ಲಿ ಕಾಲೇಜು ಕಾನೂನುಬಾಹಿರವಾಗಿ ಶುಲ್ಕ ಪಾವತಿಸಲು ಹೇಳುತ್ತಿದೆ ಎಂದು ದೂರು ಕೊಟ್ಟರು. ಆದರೆ ನಾವು ಕಾನೂನು ಬಾಹಿರವಾಗಿ ಏನೂ ಮಾಡಿಲ್ಲ ಎಂದು ಡಾ.ಸರ್ಫ್ರಾಝ್ ಹೇಳಿದರು.

ಡಿ.8ರ ಮಧ್ಯಾಹ್ನ ಹಾಲ್ ಟಿಕೆಟ್ ನೀಡಲು ಸೂಚನೆ ಬಂದಿದ್ದು ಸೋಮವಾರ ಬೆಳಗ್ಗೆ ಹಾಲ್ ಟಿಕೆಟ್ ನೀಡುವ ಪ್ರಕ್ರಿಯೆ ಆರಂಭಗೊಂಡಿದೆ. ಎಲ್ಲಾ ಸಮಸ್ಯೆ ಮುಗಿದ ಬಳಿಕ ಇಬ್ಬರು ವಿದ್ಯಾರ್ಥಿಗಳು ಮತ್ತು ಪೋಷಕರೊಬ್ಬರು ಸುದ್ದಿಗೋಷ್ಠಿ ನಡೆಸಿದ್ದಾರೆ. ಯುಯುಸಿಎಂಎಸ್ ರಾಜ್ಯ ಸರ್ಕಾರದ ಪೋರ್ಟಲ್ ಆಗಿದ್ದು ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿದ್ದು ನಮ್ಮಿಂದ ಯಾವುದೇ ಸಮಸ್ಯೆ ಆಗಿಲ್ಲ. ಪರೀಕ್ಷೆಯ ದಿನವೇ ಬೆಳಗ್ಗೆ ಮೆಂಟರ್ ಗಳಿಂದ ಹಾಲ್ ಟಿಕೆಟ್ ಪಡೆಯುವಂತೆ ಸೂಚಿಸಲಾಗಿತ್ತು. ಆದರೂ ನಮ್ಮ ಸಂಸ್ಥೆಯ ವಿರುದ್ಧ ವಿದ್ಯಾರ್ಥಿಗಳು ಸುದ್ದಿಗೋಷ್ಠಿ ನಡೆಸಿದ್ದೇಕೆ ಎನ್ನುವುದು ಗೊತ್ತಾಗು ತ್ತಿಲ್ಲ. ಉನ್ನತ ಶಿಕ್ಷಣ ಇಲಾಖೆ ಭಾನುವಾರದ ಬದಲು ಶನಿವಾರಕ್ಕಿಂತ ಮೊದಲೇ ವ್ಯವಸ್ಥೆಯನ್ನು ಸರಿಪಡಿಸಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ ಎಂದು ಡಾ.ಸರ್ಫ್ರಾಝ್ ಜೆ. ಹಾಶಿಂ ಅಭಿಪ್ರಾಯಪಟ್ಟರು.

ಡೀನ್ ಡಾ.ಸಯ್ಯದ್ ಅಮೀನ್, ನಿಯಾಝ್ ಖಾನ್, ಸರ್ಫುದ್ದೀನ್, ದೀಪ್ತಿ, ವಕೀಲ ಶಮಂತ್ ಕಂಡಿಕೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X