Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ನರ್ಸಿಂಗ್ ಕಾಲೇಜಿನಲ್ಲಿ ರಾಜ್ಯ...

ಕಣಚೂರು ನರ್ಸಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ24 Aug 2024 5:30 PM IST
share
ಕಣಚೂರು ನರ್ಸಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ

ದೇರಳಕಟ್ಟೆ: ‌ನರ್ಸಿಂಗ್ ವಿದ್ಯಾರ್ಥಿಗಳು ವೈದ್ಯಕೀಯ ವಿಚಾರಗಳ ಬಗ್ಗೆ ಅಧ್ಯಯನದ ಜೊತೆಗೆ ಅಭ್ಯಾಸ ಮಾಡಬೇಕು. ಅಧ್ಯಯನಕ್ಕೆ ಹೆಚ್ಚಿನ ತರಬೇತಿ ಪಡೆಯಬೇಕಾದ ಅಗತ್ಯ ಇದೆ ಎಂದು ಕಣಚೂರು ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನ ಅಸಿಸ್ಟೆಂಟ್ ಪ್ರೊ. ಕ್ಯಾರೊ ಲ್ ಕರಿಷ್ಮಾ ಆಲ್ಫೋನ್ಸ್ ಹೇಳಿದರು.

ಕಣಚೂರು ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಆಶ್ರಯದಲ್ಲಿ ಶನಿವಾರ ತಂತ್ರಜ್ಞಾನ ಮತ್ತು ಕೌಶಲ್ಯ ಎಂಬ ವಿಚಾರದ ಬಗ್ಗೆ ಸ್ಕಿಲ್ ಲ್ಯಾಬ್ ಆಡಿಟೋರಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ವಿಚಾರ ಮಂಡಿಸಿ ಅವರು ಮಾತನಾಡಿದರು.

ಇಂದಿನ ಕಾಲಘಟ್ಟದಲ್ಲಿ ನರ್ಸಿಂಗ್ ಶಿಕ್ಷಣ ಪಡೆಯುವವರಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಅರಿವು ಮೂಡಿಸುವ ಕೆಲಸ ಆಗಬೇಕು. ಪ್ರಾಥಮಿಕ ಹಂತದಲ್ಲೇ ಶಿಕ್ಷಕರು ಈ ವಿಚಾರದಲ್ಲಿ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಎಂದು ಹೇಳಿದರು.

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಅರಿವಳಿಕೆ ಶಾಸ್ತ್ರದ ಪ್ರಾಧ್ಯಾಪಕ ಮತ್ತು ಹೆಲ್ತ್ ಕೇರ್ ಸಿಮ್ಯುಲೇಶನ್ ಶಿಕ್ಷಣದ ಮುಖ್ಯಸ್ಥ ಡಾ. ಲುಲು ಶೆರೀಫ್ ಮಾತನಾಡಿ, ಎಲ್ಲದಕ್ಕೂ ಮೊದಲು ನಾಯಕತ್ವ ಬೇಕು.ವಿದ್ಯಾರ್ಥಿಗಳ ಶಿಕ್ಷಣ ನಾಯಕತ್ವ ಕ್ಕೆ ಅನುಗುಣವಾಗಿ ಬೆಳೆಯುತ್ತದೆ. ಈಗ ವೈದ್ಯಕೀಯ ಶಿಕ್ಷಣಕ್ಕೆ ಬೇಡಿಕೆ ಇದೆ. ವಿದ್ಯಾರ್ಥಿಗಳು ಪ್ರತಿದಿನ ತರಗತಿಗೆ ಹಾಜ ರಾಗಿ ಅಧ್ಯಯನ ಮಾಡಿದರೆ ಮಾತ್ರ ಶಿಕ್ಷಣ ಮೈಗೂಡಿಸಿಕೊಂಡು ಬರಲು ಸಾಧ್ಯ.ಶಿಕ್ಷಣದ ಜೊತೆ ರೋಗಿಗಳ ರಕ್ಷಣೆ ಹೇಗೆ ಎಂಬ ಬಗ್ಗೆ ತಿಳಿದು ಕೈಗೊಂಡಿರಬೇಕು.ರೋಗಿಗಳ ರಕ್ಷಣೆಯ ಒಂದು ಅಸ್ತ್ರ ನರ್ಸ್ ಗಳಾಗಿರುತ್ತಾರೆ. ನರ್ಸ್ ಶಿಕ್ಷಣ ಪಡೆಯುವವರು ಕೂಡ ಒಂದು ಗುರಿ ಇಟ್ಟುಕೊಂಡಿರಬೇಕು ಎಂದು ಹೇಳಿದರು.

ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 10 ವರ್ಷಗಳಿಂದ ಇಂತಹ ಕಾರ್ಯಕ್ರಮಗಳು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಹೊರತರಲು ಶಿಕ್ಷಕರು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗಾಗಿ ಜೀವನವನ್ನೇ ಮುಡಿಪಾಗಿಡುತ್ತಾರೆ. ನಾವು ಪಡೆದ ಶಿಕ್ಷಣವನ್ನು ಸಮಾಜಕ್ಕೆ ಅರ್ಪಿಸಬೇಕು ಎಂಬುದು ಅವರ ಉದ್ದೇಶ ಆಗಿರುತ್ತದೆ ಎಂದು ಹೇಳಿದರು.

ಡೀನ್ ಡಾ. ಶಹನವಾಝ್, ಅಸಿಸ್ಟೆಂಟ್ ಪ್ರೊ. ಪ್ರಿಯಾ ಜ್ಯೋತಿ ಮೊಂತೆರೊ, ಡಾ. ಸೋಮೆಶೇಖರ್ ಕಲ್ಮಾತ್, ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ಹರೀಶ್ ಶೆಟ್ಟಿ, ಡಾ ಶಮೀಮ, ಡಾ. ರಿಟಾ ಶಾಲಿನಿ ನೊರೊನ್ಹಾ ಉಪಸ್ಥಿತರಿದ್ದರು.

ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಮೋಲಿ ಸಲ್ದಾನ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X