Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ: ಉಚಿತ ಆರೋಗ್ಯ ಮೇಳ, ಜಾಗೃತಿ...

ಸುಳ್ಯ: ಉಚಿತ ಆರೋಗ್ಯ ಮೇಳ, ಜಾಗೃತಿ ಅಭಿಯಾನ

600ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ19 Jan 2025 8:16 PM IST
share
ಸುಳ್ಯ: ಉಚಿತ ಆರೋಗ್ಯ ಮೇಳ, ಜಾಗೃತಿ ಅಭಿಯಾನ

ಸುಳ್ಯ: ಹಿದಾಯ ಫೌಂಡೇಶನ್ ಮಂಗಳೂರು, ಮುಸ್ಲಿಂ ಯೂತ್ ಫೆಡರೇಶನ್ ಸುಳ್ಯ ಮತ್ತು ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಲಕಟ್ಟೆ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಗ್ರೀನ್ ವ್ಯೂ ಶಾಲಾ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ಮೇಳ ಆಯೋಜಿಸಲಾಯಿತು.

ಮೇಳವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ಉದ್ಘಾಟಿಸಿ, ಇಂತಹ ಆರೋಗ್ಯ ತಪಾಸಣೆ ಶಿಬಿರ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳಿಂದ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡುತ್ತದೆ ಎಂದರು.

ಅಧ್ಯಕ್ಷತೆಯನ್ನು ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೊಳ್ತಮಜಲು ವಹಿಸಿ ಮಾತನಾಡಿ‌, ಹಿದಾಯ ಫೌಂಡೇಶನ್ ಜಿಲ್ಲೆಯಾದ್ಯಂತ ಸ್ಥಳೀಯ ಸಂಘ ಸಂಸ್ಥೆ ಗಳ ಸಹಕಾರದೊಂದಿಗೆ ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿ ಉಚಿತ ಔಷದಿ, ಕನ್ನಡಕ ವಿತರಣೆ, ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗೆ ಸುಸಜ್ಜಿತ ಆಧುನಿಕ ವ್ಯವಸ್ಥೆಯ ಬಸ್ಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಸಾಂದೀಪನಿ ವಿಶೇಷ ಮಕ್ಕಳ ಶಾಲೆಯ ಸ್ಥಾಪಕ ಲಯನ್ ಎಂ. ಬಿ. ಸದಾಶಿವ, ಶಿಬಿರದ ಮುಖ್ಯಸ್ಥೆ ಡಾ. ಅಶ್ವಿನಿ ಶೆಟ್ಟಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್, ಎಪಿಎಂಸಿ ಮಾಜಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ಅನ್ಸಾರಿಯ ಎಜುಕೇಶನ್ ಟ್ರಸ್ಟ್ ಪದಾಧಿಕಾರಿಗಳಾದ ಹಾಜಿ ಅಬ್ದುಲ್ ಮಜೀದ್ ಜನತಾ, ಅಬ್ದುಲ್ ಲತೀಫ್ ಹರ್ಲಡ್ಕ, ಎಸ್.ಎಂ. ಹಮೀದ್, ಅಲ್ಪ ಸಂಖ್ಯಾತ ಸಹಕಾರಿ ಸಂಘದ ಅಧ್ಯಕ್ಷ ಐ. ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ, ಗಾಂಧಿನಗರ ಜುಮಾ ಮಸೀದಿ ಅಧ್ಯಕ್ಷ ಹಾಜಿ ಕೆ. ಎಂ. ಮಹಮ್ಮದ್, ಕೆಎಂಎಸ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಜನತಾ, ಹಿದಾಯ ಫೌಂಡೇಶನ್ ಉಪಾಧ್ಯಕ್ಷರುಗಳಾದ ಮಕ್ಬೂಲ್ ಅಹ್ಮದ್, ಆಸಿಫ್ ಇಕ್ಬಾಲ್, ಹೆಲ್ತ್ ಕ್ಯಾಂಪ್ ಇನ್ ಚಾರ್ಜ್ ಹಕೀಮ್ ಕಲಾಯಿ, ಕಾರ್ಯದರ್ಶಿ ಅಡ್ವೋಕೇಟ್ ಶೇಕ್ ಇಸಾಕ್, ಯೂತ್ ವಿಂಗ್ ಅಧ್ಯಕ್ಷ ಖಲೀಲ್, ಸದಸ್ಯರುಗಳಾದ ಬಶೀರ್ ವಗ್ಗ, ರಝಾಕ್ ಯೇನೆಪೋಯ ಕುಪ್ಪೆಪದವು, ಹಮೀದ್ ಕಲ್ಲಡ್ಕ, ಇಬ್ರಾಹಿಂ ಪರ್ಲಿಯಾ, ಮುಸ್ಲಿಂ ಯೂತ್ ಫೆಡರೇಶನ್ ಪದಾಧಿಕಾರಿಗಳಾದ ಕೆ. ಎಸ್. ಉಮ್ಮರ್, ಶರೀಫ್ ಕಂಠಿ, ಉನೈಸ್ ಪೆರಾಜೆ, ಖಲಂದರ್ ಎಲಿಮಲೆ, ರಶೀದ್ ಜಟ್ಟಿಪ್ಪಳ್ಳ, ಸಿದ್ದೀಕ್ ಕೊಕ್ಕೋ ಮೊದಲಾದವರು ಉಪಸ್ಥಿತರಿದ್ದರು.


ಮೀಫ್ ಉಪಾಧ್ಯಕ್ಷ ಕೆ.ಎಂ. ಮುಸ್ತಫಾ ಸ್ವಾಗತಿಸಿ, ಗ್ರೀನ್ ವ್ಯೂ ಮುಖ್ಯ ಶಿಕ್ಷಕ ಇಲ್ಯಾಸ್ ವಂದಿಸಿದರು.

ಅರೋಗ್ಯ ಮೇಳದ ವಿಶೇಷತೆಗಳು

ಉಚಿತ ಕಣ್ಣಿನ ಪರೀಕ್ಷೆ, ಉಚಿತ ಕನ್ನಡಕ ವಿತರಣೆ, ಶಸ್ತ್ರ ಚಿಕಿತ್ಸೆ ಅಗತ್ಯವುಳ್ಳವರಿಗೆ ಉಚಿತ ವ್ಯವಸ್ಥೆ, ದಂತ ತಪಾಸಣೆಗೆ ಸರ್ವ ಸನ್ನದ್ಧ ಬಸ್ ನಲ್ಲಿ ಚಿಕಿತ್ಸೆ.

ಮಹಿಳೆಯರಿಗೆ ಅತ್ಯಾಧುನಿಕ ಸೌಲಭ್ಯದ ಬಸ್ ನಲ್ಲಿ ನುರಿತ ತಜ್ಞ ವೈದ್ಯರಿಂದ ತಪಾಸಣೆ, ಡಾ. ಸುಹಾನ ಮಂಗಳೂರು ಅವರಿಂದ ವಿಶೇಷ ಮಹಿಳಾ ಆರೋಗ್ಯ ಜಾಗೃತಿ ಅಭಿಯಾನ ಉಪನ್ಯಾಸ, ಉಚಿತ ಬಿ. ಪಿ, ಶುಗರ್ ಟೆಸ್ಟ್ ನೊಂದಿಗೆ ಜನರಲ್ ಟೆಸ್ಟ್, ಮೂಳೆ ತಪಾಸಣೆ ನಡೆಸಲಾಯಿತು.

ಮಕ್ಕಳ ತಜ್ಞ ರಿಂದ ಮಕ್ಕಳಿಗೆ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X