Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೊಕ್ಕೊಟ್ಟು: ಸಿಪಿಎಂ 24ನೇ ಉಳ್ಳಾಲ ವಲಯ...

ತೊಕ್ಕೊಟ್ಟು: ಸಿಪಿಎಂ 24ನೇ ಉಳ್ಳಾಲ ವಲಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ20 Oct 2024 1:23 PM IST
share
ತೊಕ್ಕೊಟ್ಟು: ಸಿಪಿಎಂ 24ನೇ ಉಳ್ಳಾಲ ವಲಯ ಸಮ್ಮೇಳನ

ಉಳ್ಳಾಲ: ಪ್ರಜಾಪ್ರಭುತ್ವ ಉಳಿವಿಗಾಗಿ ಸಮ್ಮೇಳನವನ್ನು ಸಿಪಿಎಂ ಹಮ್ಮಿಕೊಳ್ಳುತ್ತಿದೆ. ಆದರೆ ಕಮ್ಯುನಿಸ್ಟರು ಸರ್ವಾಧಿಕಾರಿ ಎಂದು ಆರೋಪ ಮಾಡುತ್ತಾರೆ. ನಾವು ಜಾಗತಿಕ ಮಟ್ಟದಲ್ಲಿ ಪರಿಸ್ಥಿತಿ ಅವಲೋಕನ ಮಾಡಿ, ದೇಶದ ಪರಿಸ್ಥಿತಿ ಅರ್ಥ ಮಾಡಿಕೊಂಡು ಕೆಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಸರ್ವಾಧಿಕಾರಿ ಧೋರಣೆ ಅನುಸರಿಸುವವರು ನಾವಲ್ಲ ಎಂದು ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಹೇಳಿದರು.

ಅವರು ತೊಕ್ಕೊಟ್ಟು ಸಮೃದ್ಧಿ ಸಭಾಂಗಣದಲ್ಲಿ ರವಿವಾರ ನಡೆದ ಸಿಪಿಎಂ 24ನೇ ಉಳ್ಳಾಲ ವಲಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

ಬಂಡವಾಳಶಾಹಿಗಳ ಬಗ್ಗೆ ಧೋರಣೆಯಿಂದ ದೇಶ ಹಾಳಾಗುತ್ತದೆ. ಜಾಗತಿಕ ಮಟ್ಟದ ಅಧ್ಯಯನದಲ್ಲಿ 140 ಕೋಟಿ ಜನರ ಪೈಕಿ 23 ಕೋಟಿ ಜನ ಭಾರತದಲ್ಲಿ ಹಸಿವಿನಿಂದ ಸಾಧಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಇಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಇದರಿಂದ ಅರ್ಥವಾಗುತ್ತದೆ ಎಂದು ಹೇಳಿದರು.

ಎನ್ ಡಿಎ ಸರ್ಕಾರ ಆಡಳಿತದಿಂದ ದೇಶ ಹದಗೆಟ್ಟಿದೆ. ಇಲ್ಲಿನ ಜನರಿಗೆ ಯಾವುದೇ ರಕ್ಷಣೆ ಇಲ್ಲ. ಒಟ್ಟಿನಲ್ಲಿ ಸಂಕಷ್ಟದ ಪರಿಸ್ಥಿತಿ ಈಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರೋಧಿ ಮತಗಳನ್ನು ಒಗ್ಗೂಡಿಸುವ ಕೆಲಸ ಮಾಡಲಾಯಿತು. ಇಂಡಿಯಾ ಒಕ್ಕೂಟ ಮಾಡಿದ್ದು ಸಿಪಿಎಂ ಹೊರತು ಕಾಂಗ್ರೆಸಿಗರಲ್ಲ. ಇದರಲ್ಲಿ ಅತಿದೊಡ್ಡ ಪಾತ್ರ ಸಿಪಿಎಂನದ್ದು ಇತ್ತು. ಇದು 400 ಸ್ಥಾನ ಪಡೆಯುವ ಬಿಜೆಪಿಯ ಆಕಾಂಕ್ಷೆಗೆ ತಣ್ಣೀರೆರಚಿತು ಎಂದು ಹೇಳಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ರಮೇಶ್ ಉಳ್ಳಾಲ ಮಾತನಾಡಿ, ದೇಶದ ಬಜೆಟ್47 ಲಕ್ಷ ಕೋಟಿ ರೂ. ಒಳಗೆ ಇದೆ. ಇದಕ್ಕಿಂತ ಜಾಸ್ತಿ ಮೊತ್ತದ ಆಸ್ತಿ ಬಂಡವಾಳಶಾಹಿಗಳ ಕೈಯಲ್ಲಿ ಇದೆ. ಇವರಿಂದ ದೇಶ ಹದಗೆಡುತ್ತದೆ. ಇದೀಗ ಇಸ್ರೇಲ್, ಫೆಲೆಸ್ತೀನ್ ನಡುವೆ ಯಾಕೆ ಯುದ್ಧ ಆಗುತ್ತದೆ. ಇದಕ್ಕೆ ಕಾರಣ ಏನು ಎಂಬುದನ್ನು ಎಲ್ಲರೂ ತಿಳಿಯಬೇಕು. ಅಮೆರಿಕ ತೈಲ ಉತ್ಪಾದನೆಯಾಗುವ ಮುಸ್ಲಿಮ್ ರಾಷ್ಟ್ರ ಗಳ ವಿರುದ್ಧ ಇಸ್ರೇಲ್ ಅನ್ನು ಮುಂದಿಟ್ಟುಕೊಂಡು ದಾಳಿ ಮಾಡುತ್ತದೆ. ಅವರಿಗೆ ಆ ರಾಷ್ಟ್ರಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು. ಇದಕ್ಕಾಗಿ ಸಾಮ್ರಾಜ್ಯ ಶಾಹಿ ಅಮೆರಿಕ ಇಸ್ರೇಲ್ ಮುಖಾಂತರ ನರಮೇಧ ಮಾಡುತ್ತಿದೆ ಎಂದು ಹೇಳಿದರು.

ಫೆಲೆಸ್ತೀನ್ ವಿರುದ್ಧ ದಾಳಿಗೆ ಇಸ್ರೇಲ್ ರಾಷ್ಟ್ರದಲ್ಲೇ ವಿರೋಧ ಇದೆ. ಇಸ್ರೇಲ್ ನಲ್ಲೇ ಕಮ್ಯುನಿಸ್ಟರು ಈ ಯುದ್ಧ ನಿಲ್ಲಬೇಕು ಎಂದು ಒತ್ತಾಯಿಸಿ ಹೋರಾಟ ಮಾಡುತ್ತಿದ್ದಾರೆ. ಭಾರತದಲ್ಲಿ ಫೆಲೆಸ್ತೀನ್ ಧ್ವಜ ಹಿಡಿದರೆ ಎಫ್ ಐಆರ್ ದಾಖಲು ಆಗುತ್ತದೆ. ನಾವಿರುವುದು ಫೆಲೆಸ್ತೀನ್ ಪರ, ಇಸ್ರೇಲ್ ಪರ ಅಲ್ಲ. ಮತ್ತೆ ಫೆಲೆಸ್ತೀನ್ ಧ್ವಜ ಹಿಡಿದ ವ್ಯಕ್ತಿ ಮೇಲೆ ಪ್ರಕರಣ ದಾಖಲು ಮಾಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಸಿಪಿಎಂ ಉಳ್ಳಾಲ ವಲಯ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಇಸ್ರೇಲ್, ಪ್ಯಾಲೆಸ್ತೀನ್ ದಾಳಿ ಖಂಡನೆ ಮಾಡಿ ತಕ್ಷಣ ಯುದ್ಧ ಸ್ಥಗಿತ ಮಾಡುವಂತೆ ಆಗ್ರಹಿಸಿ ಸಭೆಯಲ್ಲಿ ನಿರ್ಣಯ ಮಂಡಿಸಿದರು. ಜಯಂತ್ ನಾಯ್ಕ್ ನಿರ್ಣಯ ಅಂಗೀಕರಿಸಿದರು.

ಪದ್ಮಾವತಿ ಕುತ್ತಾರ್ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಿಪಿಎಂ ಉಳ್ಳಾಲ ವಲಯ ಸಮ್ಮೇಳನದ ಕೋಶಾಧಿಕಾರಿ ಪದ್ಮಾವತಿ ಶೆಟ್ಟಿ, ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೊಟ್ಟು, ಕೃಷ್ಣಪ್ಪ ಸಾಲ್ಯಾನ್, ಜನಾರ್ದನ ಕುತ್ತಾರ್, ಲೋಕಯ್ಯ ಪನೀರ್, ರಾಮಚಂದ್ರ ಬಬ್ಬುಕಟ್ಟೆ, ಚಂದ್ರಹಾಸ ಪಿಲಾರ್, ಕಾರ್ಯದರ್ಶಿ ಸುನಿಲ್ ತೇವುಲ, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X