Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಂದಿನ ಸೋಲು ಮುಂದಿನ ಗೆಲುವಿಗೆ ಹಾದಿ:...

ಇಂದಿನ ಸೋಲು ಮುಂದಿನ ಗೆಲುವಿಗೆ ಹಾದಿ: ಯು.ಟಿ.ಖಾದರ್

‘ಹೊಂಬೆಳಕು-2024’ ಸ್ಥಳೀಯಾಡಳಿತ ಸಂಭ್ರಮ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 March 2024 3:20 PM IST
share

ಮಂಗಳೂರು, ಮಾ.2: ಜೀವನದಲ್ಲಿ ಸೋಲು ಗೆಲುವು ಸಹಜ. ಗೆದ್ದಾಗ ಸಂಭ್ರಮಿಸುವ ಜತೆಗೆ ಸೋತಾಗ ಕುಗ್ಗದೆ ಮುಂದಿನ ಗೆಲುವಿನ ದಾರಿಯಾಗಿ ಸ್ವೀಕರಿಸಿದರೆ ಜೀವನದ ಹಾದಿ ಸುಗಮವಾಗಿರುತ್ತದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅಡ್ಯಾರ್‌ನ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಟಾನ ಹಾಗೂ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಕ್ರೀಡೋತ್ಸವ- ಸಾಂಸ್ಕೃತಿಕ ಸ್ಪರ್ಧೆಗಳ ‘ಹೊಂಬೆಳಕು -2024’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನು ತಳಸ್ತರದಲ್ಲಿ ಸಾಮಾನ್ಯ ಜನರಿಗೆ ತಲುಪಿಸುವಲ್ಲಿ ಗ್ರಾಮ ಪಂಚಾಯತ್‌ಗಳ ಸದಸ್ಯರು ಹಾಗೂ ಪ್ರತಿನಿಧಿಗಳ ಪಾತ್ರ ಮಹತ್ತರವಾಗಿದ್ದು, ಅವರಿಗಾಗಿ ಈ ಕಾರ್ಯಕ್ರಮ ಯೋಜನೆ ಉತ್ತಮ ಚಿಂತನೆ ಎಂದರು.

ಕ್ರೀಡಾಜ್ಯೋತಿಯ ಮೂಲಕ ಕ್ರೀಡಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜಕೀಯ ಏನೇ ಇದ್ದರೂ ಜನ ಸೇವೆ, ಅಭಿವೃದ್ಧಿ ಕಾರ್ಯಗಳು ಜನಪ್ರತಿ ನಿಧಿ ಗಳಿಗೆ ಬಹು ಮುಖ್ಯ ಆಗಿರಬೇಕು ಎಂದರು.

ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಒಟ್ಟು ಸೇರಿಕೊಂಡು ಮಾಡುವತಂಹ ಈ ಕಾರ್ಯಕ್ರಮ ನಿರಂತರವಾಗಿ ಮುಂದುವರಿಸುವಂತೆ ಕಾರ್ಯಕ್ರಮ ಆಯೋಜಕರಾದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವರು ಸಲಹೆ ನೀಡಿದರು.

ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಪ್ರತಿ ಕ್ಷೇತ್ರದಲ್ಲಿ ಪಾರಂಪರಿಕ ಹಾಗೂ ಇತಿಹಾಸ ಹಿನ್ನೆಲೆಯೊಂದಿಗೆ ಸಂಸ್ಕೃತಿಯೂ ಬೆಸೆದುಕೊಂಡಿದೆ. ಅದು ನಮ್ಮ ದೇಶದ ವೈಶಿಷ್ಟ್ಯವಾಗಿದ್ದು, ಹೊಸತನವನ್ನು ಸ್ವೀಕರಿಸುವ ಜತೆಗೆ ಹಳೆಯದನ್ನು ಮರೆಯದೆ ಒಟ್ಟಾಗಿ ಸ್ವೀಕರಿಸಿಕೊಂಡು ನಾವು ಮುಂದೆ ಸಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಟಾನದ ಉದ್ಘಾಟನೆ ನೆರವೇರಿಸಲಾಯಿತು. ಮೂರಕ್ಕಿಂತ ಅಧಿಕ ಬಾರಿ ಜಿ.ಪಂ. ಹಾಗೂ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾದವರು, ಆರು ಹಾಗೂ ಅದಕ್ಕಿಂತ ಹೆಚ್ಚು ಬಾರಿ ಚುನಾಯಿತರಾದ ಗ್ರಾ.ಪಂ. ಸದಸ್ಯರಿಗೆ ಗೌರವಾಭಿನಂದನೆ ಸಲ್ಲಿಸಲಾಯಿತು.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಅಶೋಕ್ ರೈ,

ಶಾಸಕ ನರೇಂದ್ರ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾರ್ಯಕ್ರಮ ಸಂಘಟಕ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದೇವಿ ಪ್ರಸಾದ್ ಶೆಟ್ಟಿ, ದಕ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಗೋಕರ್ಣ ಕ್ಷೇತ್ರದ ಆಡಳಿತ ಮಂಡಳಿ ಕೋಶಾಧಿಕಾರಿ ಪದ್ಮರಾಜ್, ರಕ್ಷಿತ್ ಶಿವರಾಂ, ಮನಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಮನಪಾ ಆಯುಕ್ತ ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್,ಉಪ ಆಯುಕ್ತ ಆಯುಕ್ತ ಹರ್ಷ ವರ್ಧನ್ ಮೊದಲಾದವರು ಉಪಸ್ಥಿತರಿದ್ದರು.

ಗ್ರಾಮ ಸ್ವರಾಜ್ ಪ್ರತಿಷ್ಟಾನದ ಅಧ್ಯಕ್ಷ ಸುಭಾಶ್ ಚಂದ್ರ ಶೆಟ್ಟಿ ಸ್ವಾಗತಿಸಿದರು. ಲಾರೆನ್ಸ್ ಡಿಸೋಜಾ ವಂದಿಸಿದರು.

ಗ್ರಾಮ ಸ್ವರಾಜ್ಯದ ಆಶಯ ಎತ್ತಿ ಹಿಡಿದ ಪಥ ಸಂಚಲನ

ದ.ಕ. ಹಾಗೂ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ ಸದಸ್ಯರು 25ಕ್ಕೂ ಅಧಿಕ ತಂಡಗಳೊಂದಿಗೆ ಗ್ರಾಮ ಸ್ವರಾಜ್ಯದ ಆಶಯಗಳನ್ನು ಎತ್ತಿಹಿಡಿಯುವ ಸ್ತಬ್ಧಚಿತ್ರ, ವೇಷಭೂಷಣಗಳೊಂದಿಗೆ ಪಥ ಸಂಚಲನದ ಮೂಲಕ ಗಮನ ಸೆಳೆದರು.

ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು, ಬೆಳ್ತಂಗಡಿಯ ನಾರಾವಿ ಗ್ರಾ.ಪಂ.ನ ಸದಸ್ಯರು ಡಾ. ಅಂಬೇಡ್ಕರ್, ಪೊಲೀಸ್, ಲೈನ್‌ಮ್ಯಾನ್, ನ್ಯಾಯಾಧೀಶರ ವೇಷಭೂಷಣಗಳ ಮೂಲಕ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಉಪ್ಪಿನಂಗಡಿ ಗ್ರಾ.ಪಂ.ನ ಸದಸ್ಯರ ತಂಡವು ಭಾರತ ಮಾತೆ, ಮಹಾತ್ಮ ಗಾಂಧೀಜಿ, ಕಂಬಳ, ತುಳುನಾಡಿನ ಪಾಡ್ದನದೊಂದಿಗೆ ಭತ್ತ ನಾಟಿಯ ಮಹಿಳೆಯರ ವೇಷ ಭೂಷಣದೊಂದಿಗೆ ಪಥ ಸಂಚಲನದಲ್ಲಿ ಛಾಪು ಮೂಡಿಸಿದರೆ, ಕುತ್ತಾರು ಗ್ರಾ.ಪಂ.ನ ಸದಸ್ಯರು, ಭಾರತ ಮಾತೆ, ಭಾರತೀಯ ಸೇನೆಯ ಜತೆಗೆ ಮಹಾತ್ಮ ಗಾಂಧಿಯವರ ದಂಡಿಯಾತ್ರೆಯನ್ನು ನೆನಪಿಸುವ ಆಕರ್ಷಕ ಛದ್ಮವೇಷದ ಮೂಲಕ ಮನಸೆಳೆದರು. ಯಡ್ತಾಡಿ ಗ್ರಾ.ಪಂ.ನ ಸದಸ್ಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೋಲುವ ಛದ್ಮವೇಶದೊಂದಿಗೆ ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದರೆ, ಬೆಳುವಾಯಿ ಗ್ರಾ.ಪಂ. ಸದಸ್ಯರು ಸಾಲುಮರದ ತಿಮ್ಮಕ್ಕನ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X