Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾರಿಗೆ ಸಿಬ್ಬಂದಿ ಸೇರಿ ಐವರಿಂದ...

ಸಾರಿಗೆ ಸಿಬ್ಬಂದಿ ಸೇರಿ ಐವರಿಂದ ಅಪ್ರಾಪ್ತೆಯ ಮೇಲೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Aug 2024 7:54 AM IST
share
ಸಾರಿಗೆ ಸಿಬ್ಬಂದಿ ಸೇರಿ ಐವರಿಂದ ಅಪ್ರಾಪ್ತೆಯ ಮೇಲೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿಗಳ ಬಂಧನ

ಡೆಹ್ರಾಡೂನ್: ಇಲ್ಲಿನ ಅಂತರರಾಜ್ಯ ಬಸ್ ಟರ್ಮಿನಸ್ ನಲ್ಲಿ ನಿಲ್ಲಿಸಿದ್ದ ಬಸ್ಸಿನೊಳಗೆ 16 ವರ್ಷ ವಯಸ್ಸಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಉತ್ತರಾಖಂಡ ಸಾರಿಗೆ ನಿಗಮದ ಮೂವರು ಸಿಬ್ಬಂದಿ ಸೇರಿದಂತೆ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶದ ಮೊರದಾಬಾದ್ ನ ಯುವತಿ ಈ ಬಗ್ಗೆ ಮಕ್ಕಳ ಸಹಾಯವಾಣಿ ಅಧಿಕಾರಿಗಳಿಗೆ ಕೌನ್ಸಿಲಿಂಗ್ ವೇಳೆ ಈ ವಿವರ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಬಸ್ಸಿನ ಚಾಲಕ ಧರ್ಮೇಂದ್ರ ಕುಮಾರ್ (32), ನಿರ್ವಾಹಕ ದೇವೇಂದ್ರ ಕುಮಾರ್ (52), ಟಿಕೆಟ್ ಕೌಂಟರ್ ನ ಕ್ಯಾಷಿಯರ್ ರಾಜೇಶ್ ಕುಮಾರ್ ಸೋನ್ಕರ್ (38), ಗುತ್ತಿಗೆ ಬಸ್ಸಿನ ಚಾಲಕರಾದ ರವಿಕುಮಾರ್ (34) ಮತ್ತು ರಾಜೇಶ್ ಸಿಂಗ್ (57) ಬಂಧಿತರು. ಅಪರಾಧಕ್ಕೆ ಬಳಸಿದ ಬಸ್ ವಶಪಡಿಸಿಕೊಂಡಿರುವ ಪೊಲೀಸರು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಮನೆಯಿಂದ ಓಡಿ ಬಂದ ಯುವತಿ ದೆಹಲಿಯ ಕಾಶ್ಮೀರ ಗೇಟ್ ಐಎಸ್ ಬಿಟಿಗೆ ಆಗಮಿಸಿದ್ದಳು. ಚಾಲಕ- ನಿರ್ವಾಹಕನೊಂದಿಗೆ ಮಾತನಾಡಿದಾಗ ಡೆಹ್ರಾಡೂನ್ ಗೆ ಕರೆದೊಯ್ಯುವ ಭರವಸೆ ನೀಡಿ ಟಿಕೆಟ್ ಹಣವನ್ನೂ ನೀಡಿದ್ದರು. ಡೆಹ್ರಾಡೂನ್ ತಲುಪಿದಾಗ ಬಸ್ಸನ್ನು ಯಾರಿಗೂ ಕಾಣದ ಜಾಗದಲ್ಲಿ ನಿಲ್ಲಿಸಿ, ಇತರ ಮೂವರ ಜತೆ ಸೇರಿ ಈ ಕೃತ್ಯ ಎಸಗಿದರು ಎಂದು ಹೇಳಲಾಗಿದೆ.

ಈಕೆಯನ್ನು ಡೆಹ್ರಾಡೂನ್ ಐಎಸ್ ಬಿಟಿಯಿಂದ ಪಾಟಿಯಾಲಕ್ಕೆ ಬಸ್ಸಿನಲ್ಲಿ ಕಳುಹಿಸಲು ಚಾಲಕ ಯೋಚಿಸಿದ್ದ. ರಾತ್ರಿ 1.30ರ ವೇಳೆಗೆ ಭದ್ರತಾ ಸಿಬ್ಬಂದಿಗೆ ಆಹಾರ ಮಳಿಗೆ ಬಳಿ ಯುವತಿ ಪತ್ತೆಯಾಗಿದ್ದಾಳೆ. ತಕ್ಷಣವೇ ತುರ್ತು ಸಹಾಯವಾಣಿಗೆ ಮಾಹಿತಿ ನೀಡಲಾಗಿದ್ದು, ಆಶ್ರಯ ಗೃಹಕ್ಕೆ ಕರೆದೊಯ್ಯಲಾಗಿತ್ತು. ಆಗ ಆಕೆ ಆರೋಗ್ಯವಾಗಿದ್ದು, ಸಹಜವಾಗಿದ್ದಳು. ಆಶ್ರಯಗೃಹದಲ್ಲಿ ವೈದ್ಯಕೀಯ ತಪಾಸಣೆ ಮತ್ತು ಕೌನ್ಸಿಲಿಂಗ್ ನಡೆಸಿದಾಗ ತನ್ನ ಪೋಷಕರು ಮೃತಪಟ್ಟಿದ್ದು, ಕುಟುಂಬದಲ್ಲಿ ಉಳಿದವರು ಮನೆಯಿಂದ ಹೊರಹಾಕಿದ್ದಾಗಿ ಬಹಿರಂಗಪಡಿಸಿದ್ದಾಳೆ.

ಮೂರನೇ ಬಾರಿ ಕೌನ್ಸಿಲಿಂಗ್ ವೇಳೆ ಅತ್ಯಾಚಾರ ಘಟನೆಯನ್ನು ವಿವರಿಸಿದ್ದಾಳೆ. ಸಿಸಿಟಿವಿ ದೃಶ್ಯಾವಳಿಯನ್ನು ನೋಡಿದಾಗ ಯುವತಿ ಒಬ್ಬ ಆರೋಪಿಯ ಜತೆ ಇದ್ದುದು ಪತ್ತೆಯಾಗಿದ್ದು, ಆತನನ್ನು ಪತ್ತೆ ಮಾಡಿ ವಿಚಾರಣೆಗೆ ಗುರುಪಡಿಸಿದಾಗ ಇತರರ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಎಲ್ಲರೂ ತಪ್ಪೊಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X