Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಳೆಯ ಪೋಸ್ಟ್ ಗಳಲ್ಲಿ ತಮಿಳಿನ 'ரூ'...

ಹಳೆಯ ಪೋಸ್ಟ್ ಗಳಲ್ಲಿ ತಮಿಳಿನ 'ரூ' ಚಿಹ್ನೆ ಬಳಸಿದ್ದ ನಿರ್ಮಲಾ ಸೀತಾರಾಮನ್; ಟೀಕೆಗೆ ಗುರಿಯಾದ ವಿತ್ತ ಸಚಿವೆ

ತಮಿಳುನಾಡು ಸರಕಾರದ ವಿರೋಧದಿಂದ ಪ್ರತ್ಯೇಕತಾವಾದಿ ಭಾವನೆಗಳಿಗೆ ಕುಮ್ಮಕ್ಕು ಎಂದಿದ್ದ ವಿತ್ತ ಸಚಿವೆ

ವಾರ್ತಾಭಾರತಿವಾರ್ತಾಭಾರತಿ15 March 2025 11:51 AM IST
share
ಹಳೆಯ ಪೋಸ್ಟ್ ಗಳಲ್ಲಿ ತಮಿಳಿನ ரூ ಚಿಹ್ನೆ ಬಳಸಿದ್ದ ನಿರ್ಮಲಾ ಸೀತಾರಾಮನ್; ಟೀಕೆಗೆ ಗುರಿಯಾದ ವಿತ್ತ ಸಚಿವೆ

ಹೊಸದಿಲ್ಲಿ: ತಮಿಳುನಾಡು ಸರ್ಕಾರವು 2025-26 ರ ರಾಜ್ಯ ಬಜೆಟ್ ಪತ್ರದಲ್ಲಿ ಅಧಿಕೃತ ರೂಪಾಯಿ ಚಿಹ್ನೆ(₹)ಯನ್ನು ತಮಿಳು ಅಕ್ಷರ 'ரூ'(ರೂ)ವಿನೊಂದಿಗೆ ಬದಲಾಯಿಸಿದ್ದಕ್ಕಾಗಿ ಟೀಕಿಸಿದ್ದ ಬಿಜೆಪಿಯು, ಅದೇ ಚಿಹ್ನೆಯನ್ನು ಬಳಸಿದ ತನ್ನದೇ ನಾಯಕರ ಹಳೆಯ ಸಾಮಾಜಿಕ ಮಾಧ್ಯಮ ಪೋಸ್ಟ್‌ ಗಳು ವೈರಲ್ ಆದ ನಂತರ ಟೀಕೆಗೆ ಗುರಿಯಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಡಿಎಂಕೆ ನೇತೃತ್ವದ ಸರ್ಕಾರವು ಪ್ರಾದೇಶಿಕತೆಯ ಸೋಗಿನಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದರು. ಈ ಮಧ್ಯೆ ಪತ್ರಕರ್ತ, ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮುಹಮ್ಮದ್ ಝುಬೈರ್, ನಿರ್ಮಲಾ ಸೀತಾರಾಮನ್ ಅವರು 2017 ರಲ್ಲಿ ತಮಿಳು 'ரூ'(ರೂ)ಚಿಹ್ನೆಯನ್ನು ಹಲವು ಬಾರಿ ಬಳಸಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸ್ಕ್ರೀನ್‌ ಶಾಟ್‌ ಗಳನ್ನು ಹಂಚಿಕೊಂಡಿದ್ದಾರೆ.

ಅಲ್ಲದೇ ಈ ವಿಚಾರದಲ್ಲಿ ಡಿಎಂಕೆ ಸರ್ಕಾರವನ್ನು ಪ್ರಶ್ನಿಸಿದ್ದ ಮತ್ತು ರಾಷ್ಟ್ರೀಯ ರೂಪಾಯಿ ಚಿಹ್ನೆಗೆ ಅವಮಾನ ಎಂದು ಕರೆದಿದ್ದ ಬಿಜೆಪಿ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಅವರು 2023 ಮತ್ತು ಕಳೆದ ವರ್ಷದ ಟ್ವೀಟ್ ಗಳಲ್ಲಿ ಸೇರಿದಂತೆ ಹಲವಾರು ಪೋಸ್ಟ್‌ ಗಳಲ್ಲಿ 'ரூ'(ರೂ)ಅನ್ನು ಬಳಸಿರುವುದೂ ಈಗ ವೈರಲ್ ಆಗಿದೆ.

ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂಬ ಒತ್ತಾಯದ ನಡುವೆ ತಮಿಳುನಾಡು ಸರಕಾರ ಮತ್ತು ಕೇಂದ್ರ ಸರಕಾರದ ನಡುವೆ ಭಾಷಾ ವಿಚಾರದಲ್ಲಿ ತೀವ್ರ ತಿಕ್ಕಾಟ ನಡೆಯುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು 'ದ್ರಾವಿಡ ಮಾದರಿ' ಮತ್ತು 'ತಮಿಳುನಾಡು ಬಜೆಟ್ 2025' ಎಂಬ ಹ್ಯಾಶ್ಟ್ಯಾಗ್ಗಳೊಂದಿಗೆ ತಮಿಳು ರೂಪಾಯಿ ಚಿಹ್ನೆಯನ್ನು ಒಳಗೊಂಡ ಬಜೆಟ್ ಲೋಗೋವನ್ನು ಇತ್ತೀಚಿಗೆ ಅನಾವರಣಗೊಳಿಸಿದ ಬಳಿಕ ಈ ವಿವಾದ ತಾರಕಕ್ಕೇರಿತ್ತು.

But why ma'am why. pic.twitter.com/Xfh8yk9Nxb

— Mohammed Zubair (@zoo_bear) March 13, 2025

Thiru @annamalai_k Why use 'ரூ' symbol in your tweets instead of ₹ rupee symbol sir? https://t.co/Fxls2yytjz pic.twitter.com/UXrUsz7fxW

— Mohammed Zubair (@zoo_bear) March 13, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X