Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿತೀಶ್ ಕುಮಾರ್ ಭಂಗಿಯ ನಶೆಯಲ್ಲಿ...

ನಿತೀಶ್ ಕುಮಾರ್ ಭಂಗಿಯ ನಶೆಯಲ್ಲಿ ವಿಧಾನಸಭೆಗೆ ಬರುತ್ತಾರೆ: ರಾಬ್ರಿ ದೇವಿ ಆರೋಪ

ವಾರ್ತಾಭಾರತಿವಾರ್ತಾಭಾರತಿ12 March 2025 9:25 PM IST
share
ನಿತೀಶ್ ಕುಮಾರ್ ಭಂಗಿಯ ನಶೆಯಲ್ಲಿ ವಿಧಾನಸಭೆಗೆ ಬರುತ್ತಾರೆ: ರಾಬ್ರಿ ದೇವಿ ಆರೋಪ

ಪಾಟ್ನಾ: “ನಿತೀಶ್ ಕುಮಾರ್ ಭಂಗಿಯ ನಶೆಯಲ್ಲಿ ವಿಧಾನಸಭೆಗೆ ಬರುತ್ತಾರೆ” ಎಂದು ವಿಧಾನ ಪರಿಷತ್ ಕಲಾಪದಲ್ಲಿ ಅವರೊಂದಿಗೆ ಮಾತಿನ ಚಕಮಕಿ ನಡೆದ ನಂತರ ಬಿಹಾರ ವಿಧಾನ ಪರಿಷತ್ ವಿಪಕ್ಷ ನಾಯಕಿ ರಾಬ್ರಿ ದೇವಿ ಆರೋಪಿಸಿದ್ದಾರೆ.

ಇದಕ್ಕೂ ಮುನ್ನ, ಬುಧವಾರದಂದು ಮುಖ್ಯಂಮಂತ್ರಿ ನಿತೀಶ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಡುವಿನ ಅಭೂತಪೂರ್ವ ಮಾತಿನ ಚಕಮಕಿಗೆ ಬಿಹಾರ ವಿಧಾನ ಪರಿಷತ್ ಸಾಕ್ಷಿಯಾಯಿತು. ಸದ್ಯ ರಾಬ್ರಿ ದೇವಿ ಬಿಹಾರ ವಿಧಾನ ಪರಿಷತ್ ವಿಪಕ್ಷ ನಾಯಕಿಯಾಗಿದ್ದಾರೆ.

ನಂತರ, ಇನ್ನಿತರ ವಿರೋಧ ಪಕ್ಷಗಳ ಸದಸ್ಯರೊಂದಿಗೆ ಸದನದಿಂದ ಹೊರಗೆ ಬಂದ ರಾಬ್ರಿ ದೇವಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಭಂಗಿಯ ನಶೆಯಲ್ಲಿದ್ದಾರೆ ಎಂದು ಮಾಧ್ಯಮಗಳೆದುರು ಆರೋಪಿಸಿದರು. ಇದೇ ವೇಳೆ, ಮಾನಸಿಕವಾಗಿ ಅಸ್ಥಿರವಾಗಿರುವ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ರಾಬ್ರಿ ದೇವಿಯ ಪುತ್ರ ಹಾಗೂ ವಿಧಾನಸಭಾ ವಿಪಕ್ಷ ನಾಯಕ ತೇಜಸ್ವಿ ಯಾದವ್ ಆಗ್ರಹಿಸಿದರು.

ನನ್ನ ಪ್ರಶ್ನೆಗೆ ಸರಕಾರ ನೀಡಿರುವ ಉತ್ತರದಿಂದ ನನಗೆ ಸಮಾಧಾನವಾಗಿಲ್ಲ ಎಂದು ಸದನದ ಗಮನಕ್ಕೆ ತರಲು ಆರ್ಜೆಡಿ ಮೈತ್ರಿಪಕ್ಷವಾದ ಸಿಪಿಐ(ಎಂಎಲ್)ನ ವಿಧಾನ ಪರಿಷತ್ ಸದಸ್ಯೆ ಶಶಿ ಯಾದವ್ ತಮ್ಮ ಆಸನದಿಂದ ಎದ್ದು ನಿಂತಾಗ, ಈ ಮಾತಿನ ಚಕಮಕಿ ನಡೆಯಿತು.

ಆದರೆ, ಮೇಲ್ಮನೆಯ ಸದಸ್ಯರೂ ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, “ಸರಕಾರವು ಸಾಕಷ್ಟು ಕೆಲಸ ಮಾಡುತ್ತಿದೆ. ಈ ಹಿಂದಿನ ಸರಕಾರಗಳು ಏನೂ ಮಾಡಿರಲಿಲ್ಲ” ಎಂದು ಹೇಳಿಕೆ ನೀಡಿದರು.

ಇದರಿಂದ ಕುಪಿತಗೊಂಡ ರಾಬ್ರಿ ದೇವಿ, “ನೀವು ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಯಾವುದೇ ಕೆಲಸಗಳಾಗಿಲ್ಲ ಎಂದು ಹೇಳುತ್ತಿದ್ದೀರಿ. ಹಾಗಾದರೆ, ದಯವಿಟ್ಟು ಈ ಹಿಂದಿನ ಅವಧಿಯ ದಾಖಲೆಗಳನ್ನು ಮಂಡಿಸುವಂತೆ ಸೂಚಿಸಿ. ನಿಮಗೆ ಇನ್ನೂ ಚೆನ್ನಾಗಿ ಅರ್ಥವಾಗುತ್ತದೆ” ಎಂದು ಹರಿಹಾಯ್ದರು.

ಅದಕ್ಕೆ ಪ್ರತಿಯಾಗಿ, ತಮ್ಮ ಆಸನದಿಂದ ಎದ್ದು ನಿಂತ ನಿತೀಶ್ ಕುಮಾರ್, ತಮ್ಮ ಮಾತನ್ನು ಆಕ್ರೋಶದಿಂದ ಪುನರುಚ್ಚರಿಸಲು ಪ್ರಾರಂಭಿಸಿದರು.

ನಿತೀಶ್ ಕುಮಾರ್ ಮಾತಿಗೆ ವ್ಯಂಗ್ಯದ ತಿರುಗೇಟು ನೀಡಿದ ರಾಬ್ರಿ ದೇವಿ, “ನಿಮ್ಮ ಪ್ರಕಾರ, 2005ರಲ್ಲಿ ನೀವು ಮುಖ್ಯಮಂತ್ರಿಯಾಗುವುದಕ್ಕೂ ಮುನ್ನ ಮಹಿಳೆಯರು ಬಟ್ಟೆಗಳನ್ನೇ ಧರಿಸುತ್ತಿರಲಿಲ್ಲವೆ?” ಎಂದು ತಿವಿದರು. ಇತ್ತೀಚೆಗೆ ತಮ್ಮ ಸರಕಾರ ಹೇಗೆ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ ಎಂಬುದನ್ನು ಬಲವಾಗಿ ಪ್ರತಿಪಾದಿಸಲು ಜೆಡಿಯು ಅಧ್ಯಕ್ಷರೂ ಆದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದ ಲೋಕಾಭಿರಾಮದ ಹೇಳಿಕೆಗೆ ಪ್ರತಿಯಾಗಿ ರಾಬ್ರಿ ದೇವಿ ಹಾಗೆ ವ್ಯಂಗ್ಯ ಮಾಡಿದರು.

ಆದರೆ, ರಾಬ್ರಿ ದೇವಿಯನ್ನು ಸಮಾಧಾನಪಡಿಸಲು ಮುಂದಾದ ನಿತೀಶ್ ಕುಮಾರ್, ತಾನು ಮಹಿಳೆಯರ ಬಗ್ಗೆ ಅಗೌರವಯುತವಾಗಿ ನಡೆದುಕೊಂಡಿದ್ದೇನೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X