Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ವಿವಿನಲ್ಲಿ ಎಬಿವಿಪಿ...

ಜೆಎನ್‌ಯು ವಿವಿನಲ್ಲಿ ಎಬಿವಿಪಿ ಬೆಂಬಲಿಗರಿಂದ ಫೆೆಲೆಸ್ತೀನ್ ಧ್ವಜ ಸುಟ್ಟು ಹಾಕಿ ಇಸ್ರೇಲ್ ಪರ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ27 April 2025 8:41 PM IST
share
ಜೆಎನ್‌ಯು ವಿವಿನಲ್ಲಿ ಎಬಿವಿಪಿ ಬೆಂಬಲಿಗರಿಂದ ಫೆೆಲೆಸ್ತೀನ್ ಧ್ವಜ ಸುಟ್ಟು ಹಾಕಿ ಇಸ್ರೇಲ್ ಪರ ಘೋಷಣೆ

ಹೊಸದಿಲ್ಲಿ: ಇಸ್ರೇಲ್ ಪರವಾಗಿ ಘೋಷಣೆ ಕೂಗಿದ ಆರೋಪದಲ್ಲಿ ಜವಾಹರಲಾಲ್ ವಿವಿ (ಜೆಎನ್‌ಯು)ಯ ಅಖಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ಸದಸ್ಯರು ಶನಿವಾರ ವಿವಿ ಆವರಣದಲ್ಲಿ ಫೆಲೆಸ್ತೀನ್ ಧ್ವಜವನ್ನು ಸುಟ್ಟುಹಾಕಿದ್ದು, ಇಸ್ರೇಲ್ ಪರ ಘೋಷಣೆಗಳನ್ನು ಕೂಗಿದ್ದಾರೆ.

ಎಬಿವಿಪಿ ಬೆಂಬಲಿಗ ವಿದ್ಯಾರ್ಥಿಗಳ ಗುಂಪೊಂದು ವಿದ್ಯಾರ್ಥಿಯೊಬ್ಬನಿಂದ ಧ್ಜಜವನ್ನು ಕಸಿದುಕೊಂಡು ಅದನ್ನು ಸುಡಲು ಮುಂದಾಗುತ್ತಿರುವ ದೃಶ್ಯವಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಲವಾರು ವಿದ್ಯಾರ್ಥಿ ಸಂಘಟನೆಗಳು ಎಬಿವಿಪಿಯ ಕೃತ್ಯವನ್ನು ಖಂಡಿಸಿದ್ದು, ಅದರ ವಿರುದ್ಧ ಕಠಿಣಕ್ರಮವನ್ನು ಕೈಗೊಳ್ಳಬೇಕೆಂದು ವಿವಿ ಆಡಳಿತವನ್ನು ಆಗ್ರಹಿಸಿವೆ.

ಬಹುತೇಕ ಮಹಿಳೆಯರು, ಮಕ್ಕಳು ಸೇರಿದಂತೆ 50 ಸಾವಿರಕ್ಕೂ ಅಧಿಕ ಫೆಲೆಸ್ತೀನ್ ನಾಗರಿಕರ ಹತ್ಯೆಗೆ ಕಾರಣವಾದ ಇಸ್ರೇಲ್ನ ಸೇನಾ ಕಾರ್ಯಾಚರಣೆಯನ್ನು ಬೆಂಬಲಿಸುವ ಹಾಗೂ ಫೆಲೆಸ್ತೀನ್ ಧ್ವಜವನ್ನು ಸುಟ್ಟುಹಾಕಿದ ಕ್ರಮವನ್ನು ‘ ದಿ ಫ್ರಾಟರ್ನಿಟಿ ಮೂವ್ಮೆಂಟ್’ ಎಂಬ ಸಂಘಟನೆ ತೀವ್ರವಾಗಿ ಖಂಡಿಸಿದೆ.

ಈ ಕೃತ್ಯವು ಸಾವಿರಾರು ಫೆಲೆಸ್ತೀನಿಯರ ಹತ್ಯಾಕಾಂಡಕ್ಕೆ ಕಾರಣವಾ ಜನಾಂಗೀಯನರಹಂತಕ ಆಡಳಿತಕ್ಕೆ ಎಬಿವಿಪಿಯ ನಿಷ್ಠೆಯನ್ನು ಪ್ರತಿಬಿಂಬಿಸುತ್ತದೆ. ಈ ಇಸ್ಲಾಮೋಫೊಬಿಕ್ (ಇಸ್ಲಾಂ ಕುರಿತ ಭಯಗ್ರಸ್ತ ಮಾನಸಿಕತೆ) ಹಾಗೂ ದ್ವೇಷಕಾರಿ ಕೃತ್ಯದ ಮೂಲಕ ಎಬಿವಿಪಿಯು ವಿವಿ ಕ್ಯಾಂಪಸ್ ನಲ್ಲಿ ಹಿಂಸಾಚಾರ ಹಾಗೂ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಯತ್ನಿಸುತ್ತದೆ.ಇಂತಹ ಕೃತ್ಯಗಳು ಶಾಂತಿ, ಸೌಹಾರ್ದ ಹಾಗೂ ಎಲ್ಲರ ಒಳಪಡಿಸುವಿಕೆಯ ಆಶಯದ ಮೇಲೆ ನಡೆದ ನೇರ ಆಕ್ರಮಣವಾಗಿದೆ ಎಂದು’’ ಎಂದು ಫ್ರಾಟರ್ನಿಟಿ ಮೂವ್ಮೆಂಟ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

‘‘ದ್ವೇಷದಿಂದ ಲಾಭವನ್ನು ಪಡೆಯುವವರಿಂದ ಅಂಗೀಕಾರವನ್ನು ಪಡೆಯಲು ನಾವು ಬಯಸುವುದಿಲ್ಲ. ದಬ್ಬಾಳಿಕೆಯ ವಿರುದ್ಧ ಹೋರಾಡುವ ಜನತೆಯ ಧ್ವಜವನ್ನು ಸುಟ್ಟುಹಾಕುವುದರಿಂದ ನೀವು ಬಲಿಷ್ಠರೆನಿಸಿಕೊಳ್ಳಲಾರಿರಿ, ಇದು ಕೇವಲ ನಿಮ್ಮ ರಾಜಕೀಯ ಠೊಳ್ಳುತನವನ್ನು ಪ್ರದರ್ಶಿಸುತ್ತದೆ’’ ಎಂದು ಫ್ರಾಟರ್ನಿಟಿ ಮೂವ್ಮೆಂಟ್ ಟೀಕಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X