ಸೆ.22: ಎಂ.ಜಿ. ಹೆಗಡೆಯ ಆತ್ಮಕಥೆ ʼಚಿಮಣಿ ಬೆಳಕಿನಿಂದ’ ಬಿಡುಗಡೆ
Update: 2024-09-16 13:36 GMT
ಮಂಗಳೂರು: ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಪ್ರಕಟಿಸಿದ ಲೇಖಕ, ಅಂಕಣಕಾರ ಎಂ.ಜಿ. ಹೆಗಡೆಯವರ ಆತ್ಮಕಥೆ ಱಚಿಮಣಿ ಬೆಳಕಿನಿಂದ’ ಸೆ.22ರಂದು ಸಂಜೆ 4ಕ್ಕೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಬಿಡುಗಡೆಯಾಗಲಿದೆ.
ವಿಧಾನ ಪರಿಷತ್ ಶಾಸಕ ಬಿ.ಕೆ. ಹರಿಪ್ರಸಾದ್ ಸಭಾ ಕಾರ್ಯಕ್ರಮ ಉದ್ಘಾಟನೆ ನಡೆಸಿ ಪುಸ್ತಕ ಬಿಡುಗಡೆ ಮಾಡಲಿರು ವರು. ಅತಿಥಿಯಾಗಿ ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷ ಶ್ರೀಧರ ಭಿಡೆಯವರು ಅಧ್ಯಕ್ಷತೆ ವಹಿಸುವರು. ಲೇಖಕಿ ಭುವನೇಶ್ವರಿ ಹೆಗಡೆ ಭಾಗವಹಿಸುವರು. ಚಿಂತಕ ಅರವಿಂದ ಚೊಕ್ಕಾಡಿ ಪುಸ್ತಕ ಪರಿಚಯ ಮಾಡುವರು ಎಂದು ಪ್ರಕಟನೆ ತಿಳಿಸಿದೆ.