ಸೆ.28: ಕವಿ ಕಯ್ಯಾರ ಕಿಂಞಣ್ಣ ರೈ ಸ್ಮರಣಾರ್ಥ ಪುಸ್ತಕ ಬಿಡುಗಡೆ
Update: 2024-09-26 15:01 GMT
ಮಂಗಳೂರು: ಆರ್ಟ್ ಕೆನರಾ ಟ್ರಸ್ಟ್ ಮಂಗಳೂರು ಮತ್ತು ಕವಿತಾ ಕುಟೀರ ಪೆರಡಾಲ, ಕಾಸರಗೋಡಿನ ಪೆರಡಾಲದ ನವಜೀವನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಾಡೋಜ ಪ್ರಶಸ್ತಿ ವಿಜೇತ ಸಾಹಿತಿ ದಿ. ಕಯ್ಯಾರ ಕಿಞ್ಞಣ್ಣ ರೈ ಸ್ಮರಣಾರ್ಥ ಪ್ರಕಟಿಸಿರುವ ಐಕ್ಯವೇ ಮಂತ್ರ ಪುಸ್ತಕವನ್ನು ಸೆ.28ರ ಮಧ್ಯಾಹ್ನ 2.45ಕ್ಕೆ ನಗರದ ರಥ ಬೀದಿಯ ಬಿಇಎಂ ಹೈಸ್ಕೂಲ್ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ರಾಜ್ಯ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಅಧ್ಯಕ್ಷತೆ ವಹಿಸುವರು. ಸುರತ್ಕಲ್ನ ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಕೃಷ್ಣ ಮೂರ್ತಿ ಪುಸ್ತಕ ಪರಿಚಯಿಸುವರು ಎಂದು ಪ್ರಕಟನೆ ತಿಳಿಸಿದೆ.