ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು ಪರಾರಿ: ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರಿಗೆ ಗಾಯ

Update: 2023-10-01 15:25 GMT

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ರವಿವಾರ ಒಳಮೊಗ್ರು ಗ್ರಾಮದ ಪರ್ಪುಂಜ ಸಮೀಪ ನಡೆದಿದೆ.

ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಶೀನಪ್ಪ ನಾಯ್ಕ ಮತ್ತು ಬೊಳ್ಳಾಡಿಯ ಚಿತ್ರ ಬಿ.ಸಿ ಗಾಯಗೊಂಡವರು. ಗಾಯಾಳುಗಳಿಬ್ಬರು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶೀನಪ್ಪ ನಾಯ್ಕ ಅವರು ಕುಂಬ್ರದಿಂದ ಕುಟ್ಟಿನೋಪಿನಡ್ಕ ರಸ್ತೆಯಲ್ಲಿ ಶಾಲೆಯ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಆಕ್ಟಿವಾ ಸ್ಕೂಟರಿಗೆ ಕುಟ್ಟಿನೋಪಿನಡ್ಕ ಕಡೆಯಿಂದ ಕಾರೊಂದು ಢಿಕ್ಕಿ ಹೊಡೆದಿದ್ದು, ಕಾರು ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಅವರಿಬ್ಬರು ಘಟನೆಯಲ್ಲಿ ಗಾಯಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News