ವಿಟ್ಲ: ಅಂಗಡಿಗೆ ಢಿಕ್ಕಿ ಹೊಡೆದ ಕಾರು; ಓರ್ವನಿಗೆ ಗಾಯ

Update: 2024-08-15 18:00 GMT

ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ಕಳೆದು ಅಂಗಡಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡು ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ನಡೆದಿದೆ.

ಉಕ್ಕುಡ ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಯೋಗೀಶ ಕಾಶಿಮಠ ಅವರಿಗೆ ಸೇರಿದ ಅಂಗಡಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾನಿಗೊಂಡಿದೆ.

ಕಾರು ಚಾಲಕ ಮದ್ಯ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಕಾರು ರಸ್ತೆಯಿಂದ ನೇರವಾಗಿ ಬದಿಗೆ ಸರಿದು ಅಂಗಡಿ ಮೇಲೆ ಎರಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.








 


 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News