ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Update: 2024-09-29 16:55 GMT

ಉಳ್ಳಾಲ: ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯ ತಪ್ಪಿ ಜಾರಿ ಬಾವಿಗೆ ಬಿದ್ದು ಮೃತ ಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.

ಕೋಟೆಕಾರು ನೆತ್ತಿಲದ ಬಾಡಿಗೆ ಮನೆಯಲ್ಲಿ ವಾಸವಿದ್ದ ನವೀನ್ ಬೆಳ್ಚಾಡ(48) ಮೃತ ವ್ಯಕ್ತಿ.

ನವೀನ್ ಅವರು ರವಿವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಆವರಣ ಗೋಡೆಯನ್ನು ಸ್ವಚ್ಛಗೊಳಿಸುತ್ತಿದ್ದರು.ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ.

ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾಣಿಸಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News