ಎಕ್ಕೂರು | ಮೀನು ಸಾಗಾಟದ ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2023-12-21 09:40 GMT

ಮಂಗಳೂರು, ಡಿ.21: ಬೈಕಿಗೆ ಮೀನು ಸಾಗಾಟದ ಲಾರಿ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು. ಇವರು ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ರವೂಫ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News