ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ : ಓರ್ವನ ವಶಕ್ಕೆ

Update: 2023-10-20 15:45 GMT

ಮಂಗಳೂರು, ಅ.20: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವಾದ ಗಾಂಜ ಸೇವನೆ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ಪಚ್ಚನಾಡಿ ಗ್ರಾಮದ ಸಂತೋಷ್ ನಗರ ಎಂಬಲ್ಲಿ ಶುಕ್ರವಾರ ನಡೆದಿದೆ.

ಸಂತೋಷ್ ನಗರದ ನಿವಾಸಿ ಆರೋಪಿ ಸಂದೇಶ್ ಕುಮಾರ್(29) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಈತ ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದೆ.

ಆರೋಪಿ ಸಂದೇಶ್ ಕುಮಾರ್ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News