ಸರಕಾರಿ ನೌಕರರ ಸಂಘದ ವಿರುದ್ಧ ಅಪಪ್ರಚಾರ ಆರೋಪ: ಸೂಕ್ತ ಕ್ರಮಕ್ಕೆ ದ.ಕ.ಜಿಲ್ಲಾಧಿಕಾರಿಗೆ ಮನವಿ

Update: 2023-07-28 17:11 GMT

ಮಂಗಳೂರು,ಜು.28:ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿಯ ವಿರುದ್ಧ ಅಪಪ್ರಚಾರ ಮತ್ತು ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಶಾಖೆಗಳ ಬಗ್ಗೆ ತೇಜೋವಧೆ ಮಾಡುತ್ತಿರುವವರ ವಿರುದ್ಧ ಕ್ರಮ ಜರಗಿಸಬೇಕು ಎಂದು ದ.ಕ.ಜಿಲ್ಲಾ ಘಟಕವು ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣ. ಪದಾಧಿಕಾರಿಗಳಾದ ಎಂ.ಎಸ್. ನವೀನ್ ಕುಮಾರ್, ಖಜಾಂಚಿ ಹರೀಶ್ ಕುಮಾರ್, ಲಿಲ್ಲಿ ಪಾಯ್ಸ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News