ಅಕ್ರಮ ಮರಳು ಸಾಗಾಟ ಆರೋಪ; ಲಾರಿ ವಶಕ್ಕೆ

Update: 2024-09-19 15:48 GMT

ಸಾಂದರ್ಭಿಕ ಚಿತ್ರ

ಉಳ್ಳಾಲ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ಬುಧವಾರ ಸಂಜೆ ನಡೆದಿದೆ.

ಕಲ್ಲಾಪು ಪಟ್ಲ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ ಚಾಲಕ ಮುನಾಜ್ ಯಾನೆ ಮುನ್ನಾ ಎಂಬಾತ ಈಚರ್ ಟಿಪ್ಪರ್ ಲಾರಿ ವಾಹನದಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಕೋಟೆಕಾರ್ ನಲ್ಲಿ ಕರ್ತವ್ಯ ದಲ್ಲಿದ್ದ ಉಳ್ಳಾಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸುರೇಶ್ ವೈ ಮತ್ತು ಸಿಬ್ಬಂದಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ .

ಈ ವೇಳೆ ಚಾಲಕ ಮುನಾಜ್ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಾರಿಯಾ ಗಿದ್ದು, ಪೊಲೀಸರು ಟಿಪ್ಪರ್ ಲಾರಿ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News