ಆಂಬ್ಯುಲೆನ್ಸ್ - ಕಂಟೈನರ್ ಮಧ್ಯೆ ಅಪಘಾತ: ಐವರಿಗೆ ಗಾಯ

Update: 2024-09-02 15:06 GMT

ಸುಳ್ಯ: ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್‌ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಕುಂಬ್ರ ಬಳಿ ಸೋಮವಾರ ಸಂಜೆ ನಡೆದಿದೆ.

ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಜಯಪ್ರಕಾಶ್ ಎಂಬವರು ಚಲಾಯಿಸುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಇನ್ನೊಂದು ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ಬಗ್ಗೆ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News