ರಿಕ್ಷಾಕ್ಕೆ ಆ್ಯಂಬುಲೆನ್ಸ್ ಢಿಕ್ಕಿ: ಇಬ್ಬರಿಗೆ ಗಾಯ

Update: 2023-09-27 16:12 GMT

ಮಂಗಳೂರು: ಪಡೀಲ್ ರೈಲ್ವೆ ಅಂಡರ್‌ಪಾಸ್ ಬಳಿ ರಿಕ್ಷಾವೊಂದಕ್ಕೆ ಆ್ಯಂಬುಲೆನ್ಸ್ ಢಿಕ್ಕಿ ಹೊಡೆದ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಇದರಿಂದ ಇಬ್ಬರಿಗೆ ಗಾಯವಾಗಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಅಬ್ದುಲ್ ರಝಾಕ್ ಎಂಬವರು ತನ್ನ ಸಹೋದರ ಹುಸೈನ್ ಫಾರೂಕ್ ಮತ್ತು ಸಹೋದರನ ಪುತ್ರಿ ನಫೀಝಾ ಅನಂ ಅವರನ್ನು ಸಹ ಪ್ರಯಾಣಿಕರಾಗಿ ಕುಳ್ಳಿರಿಸಿಕೊಂಡು ಕಣ್ಣೂರಿನಿಂದ ಮಂಗಳೂರಿಗೆ ರಿಕ್ಷಾದಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ಆ್ಯಂಬುಲೆನ್ಸ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

ಆ್ಯಂಬುಲೆನ್ಸ್ ಚಾಲಕ ಅಂಜನಪ್ಪನ ನಿರ್ಲಕ್ಷತನದ ಚಾಲನೆಯಿಂದ ತಾನು ಮತ್ತು ನಫೀಝಾ ಆಟೋರಿಕ್ಷಾ ಸಮೇತ ಡಾಮರು ರಸ್ತೆಗೆ ಬಿದ್ದ ಪರಿಣಾಮ ಗಾಯವಾಗಿದೆ. ನಫೀಝಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ದಾಖಲಿಸಲಾ ಗಿದೆ ಎಂದು ಅಬ್ದುಲ್ ರಝಾಕ್ ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News