ಆ.20: ಕೇಂದ್ರ ಸಚಿವರ ಪ್ರವಾಸ

Update: 2023-08-19 16:50 GMT

ಮಂಗಳೂರು,ಆ.19: ಕೇಂದ್ರದ ಬಂದರು, ಒಳನಾಡು ಜಲಸಾರಿಗೆ ಹಾಗೂ ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಆ.20ರಂದು ದ.ಕ. ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 7:20ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಕಾಸರಗೋಡಿಗೆ ತೆರಳಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 2:30ಕ್ಕೆ ಪಣಂಬೂರಿನಲ್ಲಿ ನಡೆಯಲಿರುವ ಗ್ಲೋಬಲ್ ಮಾರಿಟೈಮ್ ಇಂಡಿಯಾ ಸಮ್ಮಿಟ್-2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆ.21ರಂದು ಪುಣೆಗೆ ತೆರಳಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News