ಮಂಗಳೂರು ಮಹಾನಗರ ಪಾಲಿಕೆಗೆ ಪ್ರಶಸ್ತಿ ಪ್ರದಾನ

Update: 2023-07-28 14:33 GMT

ಮಂಗಳೂರು : ನನ್ನ ಜೀವನ-ನನ್ನ ಸ್ವಚ್ಚ ನಗರ ಕಾರ್ಯಕ್ರಮವನ್ನು ಉತ್ತಮವಾಗಿ ಅನುಷ್ಠಾನಗೊಳಿಸಿರುವ ಮಂಗಳೂರು ಮಹಾನಗರ ಪಾಲಿಕೆಗೆ ಲಭಿಸಲಾದ ಪ್ರಶಸ್ತಿಯನ್ನು ಗುರುವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಕೇಂದ್ರ ಸರಕಾರದ ಮೇರಿ ಲೈಫ್ ಮೇರಾ ಸ್ಪಚ್ಛಾ ಶೆಹರ್ ಅಭಿಯಾನದಡಿ ನನ್ನ ಜೀವನ, ನನ್ನ ಸ್ವಚ್ಚ ನಗರ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿತ್ತು. ಅದರಂತೆ ಪ್ರಶಸ್ತಿಗೆ ಆಯ್ಕೆಗೊಂಡ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮಂಗಳೂರು ಮಹಾನಗರಪಾಲಿಕೆಯ ಉಪ ಆಯುಕ್ತ (ಆಡಳಿತ) ರವಿಕುಮಾರ್‌ಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭ ಮನಪಾ ಪರಿಸರ ಅಭಿಯಂತರ ದಯಾನಂದ ಪೂಜಾರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News