ಎಸ್‌ಐಒ ವತಿಯಿಂದ ಮಾದಕ ದ್ರವ್ಯ ವಿರುದ್ಧ ಜಾಗೃತಿ ಅಭಿಯಾನ

Update: 2023-09-10 15:29 GMT

ಮಂಗಳೂರು, ಸೆ.10: ಎಸ್‌ಐಒ ಮಂಗಳೂರು ವತಿಯಿಂದ ಮಾದಕ ದ್ರವ್ಯದ ವಿರುದ್ಧ ಜಾಗೃತಿ ಅಭಿಯಾನವನ್ನು ಹಮ್ಮಿ ಕೊಳ್ಳಲಾಗಿದ್ದು, ಶನಿವಾರ ನಗರದ ಬದ್ರಿಯಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಅಭಿಯಾನವನ್ನು ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಗಣೇಶ್ ಮುಲ್ಕಿ ನಾಯಕ್ ಭಾಗವಹಿಸಿ ಮಾತನಾಡಿದರು.

ಮಾದಕ ವ್ಯಸನದ ಅಪಾಯಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಯುವಕರಲ್ಲಿ ಸ್ವಯಂ ಜಾಗೃತಿಗೆ ಉತ್ತೇಜಿಸಲಾಗುವುದು, ಮುಂದಿನ ದಿನಗಳಲ್ಲಿ ಮಂಗಳೂರಿನಾದ್ಯಂತ 30 ಶಾಲಾ-ಕಾಲೇಜುಗಳಿಗೆ ಈ ಕಾರ್ಯಕ್ರಮ ವಿಸ್ತರಿಸಲಾಗುವುದು ಎಂದು ಮಂಗಳೂರು ಅದ್ಯಕ್ಷ ಅಬ್ದುಲ್ ರಾಝಿಕ್ ಹೇಳಿದರು.

ಎಸ್‌ಐಒ ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ, ಎಸ್‌ಐಒ ದ.ಕ. ಜಿಲ್ಲಾಧ್ಯಕ್ಷ ಆಸಿಫ್ ಡಿ.ಕೆ. ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News