ಬಜ್ಪೆ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಪೊಲೀಸ್ ವಶ

Update: 2023-10-13 10:31 GMT

ಬಜ್ಪೆ: ಅಕ್ರಮವಾಗಿ‌ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

ವಶಕ್ಕೆ ಪಡೆದ ಲಾರಿಗಳ‌ ಒಟ್ಟು ಮೌಲ್ಯ 5ಲಕ್ಷ ರೂ. ರಂದು ಅಂದಾಜಿಸಲಾಗಿದೆ.

ಮಂಗಳೂರು ತಾಲೂಕಿನ ಮೂಳೂರು ಗ್ರಾಮದ ಗುರುಪುರ ಎಂಬಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ದಾಳಿ ಮಾಡಿದ್ದಾರೆ.

ಈ ವೇಳೆ ಲಾರಿಯ ಚಾಲಕರು ಲಾರಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್, ಪಿಎಸ್ಸೈಗಳಾದ ಗುರಪ್ಪ ಕಾಂತಿ, ರೇವಣಸಿದ್ದಪ್ಪ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News