ಕೇರಳದಿಂದ ಜಾನುವಾರು ಸಾಗಾಟಕ್ಕೆ ನಿಷೇಧ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Update: 2023-08-07 13:55 GMT

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಕಾಲುಬಾಯಿ ಜ್ವರ ದ.ಕ.ಜಿಲ್ಲೆಗೆ ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೇರಳದಿಂದ ಜಿಲ್ಲೆಗೆ ಹಾಗೂ ಜಿಲ್ಲೆಯಿಂದ ಕೇರಳಕ್ಕೆ ಜಾನುವಾರುಗಳನ್ನು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಕೇರಳ ರಾಜ್ಯದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಈ ರೋಗದ ವೈರಸ್‌ನಿಂದ ಬಹುಬೇಗ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತದೆ. ಇದು ಜಾನುವಾರುಗಳಿಗೆ ಮಾರಣಾಂತಿಕವಾಗಿರುವುದರಿಂದ ಮುಂದಿನ ಆದೇಶದವರೆಗೆ ಜಾನುವಾರು ಸಾಗಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News