ಬಂಟ್ವಾಳ: ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ ಆರೋಪ; ಐವರ ವಿರುದ್ಧ ಪ್ರಕರಣ ದಾಖಲು

Update: 2024-06-10 08:46 GMT

ಬಂಟ್ವಾಳ : ಮಾರಕಾಸ್ತರಗಳನ್ನು ಪ್ರದರ್ಶಿಸಿ  ಸಾರ್ವಜನಿಕರಿಲ್ಲಿ ಆತಂಕವುಂಟುಮಾಡಲು ಯತ್ನಿಸುತ್ತಿದ್ದ ಯುವಕರ ಗುಂಪೊಂದು ಪೊಲೀಸರನ್ನು ಕಂಡು ಪರಾರಿಯಾಗಿದ್ದು, ಮಾರಕಾಸ್ತ್ರಗಳ ಸಹಿತ ರಿಕ್ಷಾವೊಂದನ್ನು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಬಡಗಬೆಳ್ಳೂರು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆರೋಪಿಗಳನ್ನು ಬೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಎಂದು ಗುರುತಿಸಲಾಗಿದೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹರೀಶ್ ಎಂ ಆರ್ ನೇತೃತ್ವದ ಪೊಲೀಸರು ತೆರಳಿದಾಗ, ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಾರ್ವಜನಿಕವಾಗಿ ಭಯವನ್ನುಂಟು ಮಾಡುತ್ತಿರುವುದು ಕಂಡುಬಂದಿದೆ. ಇಲಾಖಾ ವಾಹನ ಸ್ಥಳಕ್ಕೆ ಬರುವುದನ್ನು ಕಂಡ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಕೆ.ಎ 70 - 3479 ನೋಂದಣಿ ಸಂಖ್ಯೆಯ ಅಟೋ ರಿಕ್ಷಾದಲ್ಲಿ ಒಂದು ತಲವಾರು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಆರೋಪಿಗಳ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News