ಬಂಟ್ವಾಳ: ಮನೆಗೆ ನುಗ್ಗಿ ನಗ-ನಗದು ಕಳವು

Update: 2024-09-13 16:16 GMT

ಬಂಟ್ವಾಳ: ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲ ಚಿಲಕ ಮುರಿದು ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಮೌಲ್ಯದ ನಗ ನಗದು ಕಳವುಗೈದಿರುವ ಬಗ್ಗೆ ಪುದುವಿನ ಗುರುವಾರ ಬೆಳಕಿಗೆ ಬಂದಿದೆ.

ಪುದು ಗ್ರಾಮದ ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರು ಪತ್ನಿ ಜೊತೆ ಸೆ. 8 ರಂದು ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿಂದ ಸೆ.12 ರಂದು ಮನೆಗೆ ವಾಪಸು ಬಂದಿದ್ದು, ಮನೆಯ ಮುಂಬಾಗಿಲ ಚಿಲಕ ಮುರಿದು ಹಾಕಿದ್ದು ಬಾಗಿಲು ತೆರದ ಸ್ಥಿತಿಯಲ್ಲಿತ್ತು. ಒಳಗಡೆ ಹೋಗಿ ನೋಡಿದಾಗ ಕೋಣೆಯ ಬಾಗಿಲು ತೆರೆದು ಗೋಡ್ರೇಜ್ ಬೀಗ ಒಡೆಯಲಾಗಿತ್ತು. ಅದರೊಳಗೆ ಇರಿಸಲಾಗಿದ್ದ ರೂ.1,70,000 ನಗದು ಹಾಗೂ 36 ಗ್ರಾಂ ತೂಕದ ಬಂಗಾರದ ಸರ, ಕಪಾಟಿನ ಮೇಲೆ ಇದ್ದ 4,000 ರೂ. ಮೌಲ್ಯದ ಮೊಬೈಲ್ ಪೋನ್ ಸೇರಿ ಒಟ್ಟು 3.54 ಲಕ್ಷ ರೂ. ಮೌಲ್ಯದ ನಗ ನಗದು ಕಳವಾಗಿದೆ ಎಂದು ಅವರು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿಗಳಾದ ಹರೀಶ್ ಮತ್ತು ಮೂರ್ತಿ ಅವರು ಬೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News