ಬಂಟ್ವಾಳ : ಯುವಕನಿಗೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು

Update: 2023-11-09 16:25 GMT

ಸಾಂದರ್ಭಿಕ ಚಿತ್ರ

ಬಂಟ್ವಾಳ : ವ್ಯಕ್ತಿಯೋರ್ವನನ್ನು ಮಾತುಕತೆ ನಡೆಸುವ ನೆಪದಲ್ಲಿ ಕಾರಿನಲ್ಲಿ ಕರೆದುಕೊಂಡು ಹೋಗಿ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಕಸಬಾ ಗ್ರಾಮದ ನಿವಾಸಿ ನೌಷಾದ್ (35) ಎಂಬವರರು ಹಲ್ಲೆಗೊಳಗಾಗಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ನೌಶಾದ್ ಅವರು ನ 6 ರಂದು ತನ್ನ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವೇಳೆ ತುಂಬೆ ಜಂಕ್ಷನ್ ಬಳಿ ತಲುಪಿದಾಗ ಹಿಂದಿನಿಂದ ಬಂದ ಕಾರು ಸ್ಕೂಟರಿಗೆ ಅಡ್ಡ ನಿಲ್ಲಿಸಿ ಜುನೈದ್ ಹಾಗೂ ಇತರರು ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ನೌಶಾದ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News