ಬಂಟ್ವಾಳ : ಮನೆಗೆ ನುಗ್ಗಿ ನಗದು ಕಳವು

Update: 2023-09-12 17:51 GMT

ಬಂಟ್ವಾಳ : ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುಂಪಣಮಜಲು ಎಂಬಲ್ಲಿ ನಡೆದಿದೆ.

ಪುದು ಗ್ರಾ.ಪಂ.ವ್ಯಾಪ್ತಿಯ ಕುಂಪಣಮಜಲು ನಿವಾಸಿ ವಸೀಂ ಅಕ್ರಂ ಎಂಬವರ ಮನೆಯಿಂದ ಕಳವು ನಡೆದಿದ್ದು, ಕಪಾಟಿನಲ್ಲಿದ್ದ ಸುಮಾರು ‌ 60,000 ಸಾವಿರ ರೂ ನಗದು ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಸೀಂ ಅಕ್ರಂ ಅವರ ಪತ್ನಿ ಕಳೆದ ಆರು ತಿಂಗಳಿನಿಂದ ಉಳ್ಳಾಲದ ತಾಯಿ ಮನೆಯಲ್ಲಿದ್ದು, ವಸೀಂ ಅಕ್ರಂ ಕೂಡಾ ರಾತ್ರಿ ಅಲ್ಲೇ ತಂಗುತ್ತಿದ್ದರು. ಮನೆಯಲ್ಲಿ ವಸೀಂ ಅಕ್ರಂ ಅವರ ತಾಯಿ ಮಾತ್ರ ವಾಸಿಸುತ್ತಿದ್ದು ರಾತ್ರಿ ವೇಳೆ ಅವರು ಹತ್ತಿರದಲ್ಲೇ ಇದ್ದ ಇನ್ನೋರ್ವ ಮಗನ ಮನೆಯಲ್ಲಿ ಇದ್ದು ಬೆಳಿಗ್ಗೆ ವಾಪಾಸಾಗುತ್ತಿದ್ದರು.

ಸೆ. 10 ರಂದು ರಾತ್ರಿ ವೇಳೆ ಇವರು ಮನೆಯಿಂದ ತೆರಳಿದ ಬಳಿಕ ಯಾರೋ ಕಳ್ಳರು ಹಿಂಬದಿಯ ಬಾಗಿಲು ಚಿಲಕ ಮುರಿದು ಒಳಗೆ ಪ್ರವೇಶ ಮಾಡಿ ಕೋಣೆಯಲ್ಲಿ ಇದ್ದ ಎಲ್ಲಾ ವಸ್ತುಗಳನ್ನು ಜಾಲಾಡಿ ಕಪಾಟಿನಲ್ಲಿರಿಸಲಾಗಿದ್ದ ಹಣವನ್ನು ದೋಚಿಕೊಂಡು ಹೋಗಿದ್ದು

ಸೆ.11 ರಂದು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News