ಬಂಟ್ವಾಳ : ಉಡಾ ಬೇಟೆಯಾಡಿ ಫೋಟೋಗೆ ಪೋಸ್‌ ಕೊಟ್ಟ ಯುವಕ; ಪ್ರಕರಣ ದಾಖಲು

Update: 2023-10-15 16:21 GMT

ಬಂಟ್ವಾಳ : ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ (indian monitor lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದರೊಂದಿಗೆ ಪೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ.

ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಅ. 11 ರಂದು ಘಟನೆ ಬೆಳಕಿಗೆ ಬಂದಿದ್ದು, ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜ್ರಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಸಾಮಾಜಿಕ ಜಾಲಾ ತಾಣಗಳಲ್ಲಿ ಅದನ್ನು ಹರಿಯ ಬಿಟ್ಟಿದ್ದ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಕರಣದ ತನಿಖೆ ನಡಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್‌. ಮರಿಯಪ್ಪ ಮಾಹಿತಿ ನೀಡಿದ್ದಾರೆ.

ಉಡಾವನ್ನು ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್‌ಅಪ್ ಎಡ್ಮಿನ್ ನನ್ನು ವಿಚಾರಣೆಗೆ ಕರೆಸಿ ತನಿಖೆ ನಡೆಸಿದ್ದು, ಆತನ ಸಿಡಿಆರ್‌ ಪರಿಶೀಲನೆ ನಡೆಸಿ ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News