ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಯುವಕ ಆಯ್ಕೆ

Update: 2023-11-23 16:28 GMT

ಬಂಟ್ವಾಳ : ಮೂಲತಃ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು.

ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷ್ಯಾದಲ್ಲಿದ್ದು ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಉತ್ತಮ ಕ್ರೀಡಾಪಟು ಆಗಿರುವ ಅವರಿಗೆ ಕ್ರಿಕೆಟ್ ಎಂದರೆ ಅಚ್ಚುಮೆಚ್ಚು. ಇದೀಗ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News