ಬೆಳ್ತಂಗಡಿ | ದ್ವಿಚಕ್ರ ವಾಹನ ಪಲ್ಟಿ: ಮಹಿಳೆಗೆ ಗಂಭೀರ ಗಾಯ

Update: 2024-02-24 06:03 GMT

ಬೆಳ್ತಂಗಡಿ, ಫೆ.24: ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.

ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಗಾಯಗೊಂಡವರು.

ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅವರಿದ್ದ ದ್ವಿಚಕ್ರ ವಾಹನ ತೋಟತ್ತಾಡಿ ಗ್ರಾಮದ ಮೂರ್ಜೆಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದಾರೆ.

ಅವರಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಸಂತೋಷ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News