ಬೆಳ್ತಂಗಡಿ: ತೀವ್ರ ಜ್ವರದಿಂದ ಯುವತಿ ಮೃತ್ಯು

Update: 2023-08-14 06:24 GMT

ಬೆಳ್ತಂಗಡಿ: ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು,ಮನೆಯಲ್ಲಿದ್ದ ಯುವತಿ ಬಿ.ಪಿ ಕಡಿಮೆಯಾಗಿ ಮೃತಪಟ್ಟ ಘಟನೆ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ರವಿವಾರ ನಡೆದಿದೆ.

ಮೃತ ಯುವತಿಯನ್ನು ನೆರಿಯಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ(19) ಎಂದು ಗುರುತಿಸಲಾಗಿದೆ.

ಮಂಗಳೂರಿನ ಕಾಲೇಜ್ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದ ಕಾರಣ ಮನೆಗೆ ಬಂದಿದ್ದಳು. ತೀವ್ರ ಜ್ವರ ಇದ್ದ ಕಾರಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಈ ನಡುವೆ ಈಕೆಗೆ ಬಿ.ಪಿ ತೀರಾ ಕಡಿಮೆಯಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಯುವತಿಗೆ ತಂದೆ,ತಾಯಿ ಹಾಗೂ ಸಹೋದರ ಇದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News