ಮಂಗಳೂರು| ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2024-01-17 18:13 GMT

ಮಂಗಳೂರು: ನಗರ ಹೊರವಲಯದ ಕಾವೂರು ಜಂಕ್ಷನ್‌ನ ಕೆಐಒಸಿಎಲ್ ಕ್ವಾರ್ಟ್ರಸ್ ಮುಖ್ಯಗೇಟಿನ ಮುಂದೆ ಮಂಗಳವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಐಒಸಿಎಲ್ ಉದ್ಯೋಗಿ ಶೇಖರಪ್ಪ (54) ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಶೇಖರಪ್ಪ ಕರ್ತವ್ಯ ಮುಗಿಸಿ ಕ್ವಾರ್ಟ್ರಸ್ ಕಡೆಗೆ ಬರಲು ಮುಖ್ಯಗೇಟಿನ ಎದುರಿರುವ ಡಿವೈಡರ್ ಬಳಿ ಬಲಕ್ಕೆ ತಿರುಗಲು ಇಂಡಿಕೇಟರ್ ಹಾಕಿಕೊಂಡು ನಿಂತಿದ್ದಾಗ ರಾತ್ರಿ ಸುಮಾರು 11:25ಕ್ಕೆ ಬೋಂದೆಲ್ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News