ಪುತ್ತೂರು: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

Update: 2024-02-16 16:59 GMT

ಸಾಂದರ್ಭಿಕ ಚಿತ್ರ 

ಪುತ್ತೂರು: ಮಾಣಿ -ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಮದಕ ಎಂಬಲ್ಲಿ ಬೈಕ್ ಮತ್ತು ಪಿಕಪ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಬೈಕ್ ಸವಾರ ಅರಿಯಡ್ಕ ಗ್ರಾಮದ ನಿವಾಸಿ ಸುಂದರ ಪೂಜಾರಿ (60) ಮೃತಪಟ್ಟವರು. ಅವರು ತನ್ನ ಬೈಕ್‍ನಲ್ಲಿ ಕೌಡಿಚ್ಚಾರು ಮದಕ ಕಡೆ ಹೋಗುತ್ತಿದ್ದ ವೇಳೆ ಬೈಕ್ ಮತ್ತು ಪಿಕಪ್ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಸುಂದರ ಪೂಜಾರಿ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸುಂದರ ಪೂಜಾರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News