ಕಡಬ: ಕಾರು-ಸ್ಕೂಟರ್ ಢಿಕ್ಕಿ; ಶಾಲಾ ಬಾಲಕ ಮೃತ್ಯು

Update: 2023-12-16 05:36 GMT

ಕಡಬ, ಡಿ.16. ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಳಾರ ಸಮೀಪ ಶುಕ್ರವಾರ ರಾತ್ರಿ  ನಡೆದಿದೆ.

ಮೃತ ಬಾಲಕನನ್ನು ಕಳಾರ ನಿವಾಸಿ ಬಿಪಿನ್ (13) ಎಂದು ಗುರುತಿಸಲಾಗಿದೆ.  ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ತಂಗಿ ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಾಲೆಯ ಕ್ರೀಡೋತ್ಸೋವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ ಪಂಜ ಸಮೀಪದ ಪರಮೇಶ್ವರ ಎಂಬವರ ಅವಾಂತರಕ್ಕೆ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News