ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

Update: 2023-08-08 14:09 GMT

ಕೊಣಾಜೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಹಾಗೂ 6ನೇ ರ್ಯಾಂಕ್ ಪಡೆದ ಫೀನಾ ಹಕೀಮ್ ಮತ್ತು ಹರ್ಷಿತಾ ಶೆಟ್ಟಿಗಾರ್‌ರನ್ನು ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ರಮೀಝ್ ಎಂ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫಾಝ್ ಹಾಸಿಮ್ ಜೆ. ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಯಜ್ನೀಶ್ ಶುಭ ಹಾರೈಸಿದರು.

ಕಾಲೇಜಿನ ಫೇಸ್ ನ್ಯೂಸ್ ಬುಲೇಟಿನ್ 2023 ಸಂಚಿಕೆ 3ನ್ನು ಬಿಡುಗಡೆಗೊಳಿಸಲಾಯಿತು. ಪಿಎ ವಿದ್ಯಾಸಂಸ್ಥೆಯ ಎಜಿಎಂ. ಸರ್ಫುದ್ದೀನ್, ವಿವಿಧ ವಿಭಾಗಗಳ ಪ್ರಾಂಶುಪಾಲರಾದ ಪ್ರೊ.ಸೂಫಿ, ಡಾ. ಸಲೀಮುಲ್ಲಾ ಖಾನ್, ಡಾ.ಸಜೀಸ್ ರಘುನಾಥನ್. ಎಂಬಿಎ ವಿಭಾಗದ ನಿರ್ದೇಶಕ ಹಾಗೂ ಡೀನ್ (ವಿದ್ಯಾರ್ಥಿ ಕಲ್ಯಾಣ ಅಧಿಕಾರಿ) ಡಾ. ಸಯ್ಯದ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಇಸ್ಮಾಯಿಲ್ ಶಾಫಿ, ಬಯೋಟೆಕ್ನಾಲಜಿ ವಿಭಾಗದ ಡಾ.ರೊನಾಲ್ಡ್ ವಾಲ್ಟರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಇಕ್ಬಾಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಉಪಪ್ರಾಂಶುಪಾಲೆ ಡಾ.ಶರ್ಮಿಳಾ ಸ್ವಾಗತಿಸಿದರು. ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಡಾ.ಕೃಷ್ಣ ಪ್ರಸಾದ್ ವಂದಿಸಿದರು. ಬುಶೈರಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News