ಮಂಗಳೂರಿನಲ್ಲಿ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್

Update: 2024-07-09 04:16 GMT

Photo credit: X@mlrairport

ಮಂಗಳೂರು, ಜು.9: ಭಾರತ ಕ್ರಿಕೆಟ್ ತಂಡದ ಟ್ವೆಂಟಿ20 ಸ್ಪೆಷಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು.

ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಜೋಡಿ ಜು.7ರಂದು ಎಂಟನೇ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ 'ಪ್ರಣಾಮ್' ತಂಡದವರು ದಂಪತಿ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಈ ಮಾಹಿತಿಯನ್ನು ವಿಮಾನ ನಿಲ್ದಾಣದ ಆಡಳಿತ ತನ್ನ 'ಎಕ್ಸ್' ಖಾತೆಯಲ್ಲಿ ಚಿತ್ರ ಸಮೇತ ಹಂಚಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News